ಕಾಪು: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್ಪಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಡಿಸಿ ಕೂರ್ಮಾ ರಾವ್ ಮತ್ತು ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ತಮ್ಮ ವಾಹನಗಳಲ್ಲಿ ಉಡುಪಿಯಿಂದ ಹೆಜಮಾಡಿ ಕಡೆಗೆ ತೆರಳುತ್ತಿದ್ದ ವೇಳೆ ಎರ್ಮಾಳು ಬಳಿ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದನ್ನು ಗಮನಿಸಿದ್ದರು.
ವಾಹನ ನಿಲ್ಲಿಸಿ ಆತನ ಬಳಿಗೆ ಬಂದ ಅವರು ಎಬ್ಬಿಸಿ ಅಂಗರಕ್ಷಕ ಸಿಬಂದಿ ಮತ್ತು ಸ್ಥಳೀಯರ ಸಹಕಾರದೊಂದಿಗೆ ರಸ್ತೆ ಬದಿಗೆ ಕರೆ ತಂದು ಉಪಚರಿಸಿದರು. ಬಳಿಕ ಹೈವೇ ಪೆಟ್ರೋಲ್ ಪೊಲೀಸರ ಮೂಲಕ ಆತನ ಮನೆಯವರನ್ನು ಸಂಪರ್ಕಿಸಿ, ಕರೆದೊಯ್ಯುವ ವ್ಯವಸ್ಥೆ ಮಾಡಿದರು. ಈ ಮಾನವೀಯ ನಡೆ ಪ್ರಶಂಸೆಗೆ ಪಾತ್ರವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…