ಕಾಪು: ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಶಂಕರಪುರ ಕಡೆಯಿಂದ ಮೂಡುಬೆಟ್ಟು ದೇವಸ್ಥಾನ ಕಡೆಗೆ ಹೋಗುವ ಕಾಂಕ್ರೀಟ್ ಒಳ ರಸ್ತೆಯಲ್ಲಿರುವ ಕ್ಲೇರಾ ಮೆಂಡೋನ್ಸ್ ಎಂಬುವವರ ಮನೆಯಲ್ಲಿ ಆರೋಪಿ ಗೌತಮ್ ಪ್ರಭು ಎಂಬಾತನು ಅಕ್ರಮವಾಗಿ ಸುಡುಮದ್ದು (ಪಟಾಕಿ) ದಾಸ್ತಾನು ಮಾಡಿಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಿವಿಧ ಕಂಪನಿಗೆ ಸೇರಿದ ಸುಡುಮದ್ದುಗಳನ್ನು ವಶಕ್ಕೆ ಪಡೆದಿದ್ದಾರೆ.
ಅ. 29 ರಂದು ಕಾಪು ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ, ರವರಿಗೆ ಮಾಹಿತಿಯಂತೆ ದಾಳಿ ನಡೆಸಿ, ಒಟ್ಟು ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗೆ ಸೇರಿದ ವಿವಿಧ ಸುಡುಮದ್ದು(ಪಟಾಕಿ)ಗಳನ್ನು ಸ್ವಾಧೀನಪಡಸಿಕೊಳ್ಳಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಅಪರಾಧ ಕ್ರಮಾಂಕ 141/2025 ಕಲಂ: 9B(1) (b) Explosive Act-1884 ಮತ್ತು ಕಲಂ: 287, 288 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…