Featured

ಕಾಪು: ‘ಮನೆ ಮನೆಗೆ ಪೊಲೀಸ್’ ; ದೃಷ್ಠಿ ಯೋಜನೆಗೆ ಚಾಲನೆ – vishwanews24

ಕಾಪು: ‘ಮನೆ ಮನೆಗೆ ಪೊಲೀಸ್’ ; ದೃಷ್ಠಿ ಯೋಜನೆಗೆ ಚಾಲನೆ

ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ʼಮನೆ ಮನೆಗೆ ಪೊಲೀಸ್ʼ ಕಾರ್ಯಕ್ರಮದ ಭಾಗವಾಗಿ ದೃಷ್ಠಿ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಇಂದು ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೃಷ್ಠಿ ಯೋಜನೆ ಕಾರ್ಯಕ್ರಮವನ್ನು ಉಡುಪಿ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಂ ಶಂಕರ್‌ ಐಪಿಎಸ್‌ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿರುವ ಜನ ಸಂಖ್ಯೆ ಅಂದಾಜು 80 ಸಾವಿರದಿಂದ 1 ಲಕ್ಷ ಎನ್ನುವುದು . ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅಂದರೇ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರತೀ ಬೀಟಿನಲ್ಲಿ ಸುಮಾರು 80-100 ಮನೆಗಳ ಒಂದು Welfare Committee ಯನ್ನು ರಚಿಸುವುದು ಮತ್ತು ಆ ಕಮಿಟಿಯಿಂದ ಓರ್ವ ಪ್ರೈವೇಟ್‌ ಸೆಕ್ಯೂರಿಟಿ ಗಾರ್ಡ್‌ನ್ನು ನೇಮಿಸಿ, ಈ ಬೀಟ್‌ಗಳಲ್ಲಿ ರಾತ್ರಿ ಗಸ್ತು ಕರ್ತವ್ಯವನ್ನು ನಿರ್ವಹಿಸುವಂತೆ ಮಾಡುವುದು ಹಾಗೂ ಬೀಟ್‌ ಪೊಲೀಸರು ಈ ಪ್ರೈವೇಟ್‌ ಸೆಕ್ಯೂರಿಟಿ ಗಾರ್ಡ್‌ನ ನಿರಂತರ ಸಂಪರ್ಕದಲ್ಲಿರುವುದು. ಇದು ಅವರ ಮನೆಗಳಿಗೆ ರಕ್ಷಣೆಯನ್ನು ನೀಡುವಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ರೀತಿಯ ಕಮಿಟಿಗಳನ್ನು ಮಾಡುವುದರಿಂದ ಆ ಪ್ರದೇಶಗಳಲ್ಲಿ ವಾಸವಾಗಿರುವ ಜನರ ರಕ್ಷಣೆ, ವಯೋವೃದ್ಧರ ಕಾಳಜಿ, ರಾತ್ರಿ ಗಸ್ತು ಮಾಡುವುದರಿಂದ ಆಸ್ತಿಪಾಸ್ತಿ, ಜೀವ ರಕ್ಷಣೆಗಳನ್ನು ಮಾಡಬಹುದಾಗಿದೆ.

ಈ ರೀತಿಯಾದ ಕಮಿಟಿಗಳನ್ನು ಕುಂದಾಪುರ ಉಪ ವಿಭಾಗದ ಕುಂದಾಪುರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2, ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 1, ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2, ಬೈಂದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ1, ಕಾರ್ಕಳ ಉಪ ವಿಭಾಗದ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ1, ಉಡುಪಿ ಉಪ ವಿಭಾಗದ ಉಡುಪಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2, ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ1, ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ1, ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ1, ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 1, ಹಿರಿಯಡಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 1 ಕಮಿಟಿಯನ್ನು ರಚಿಸಲಾಗಿರುತ್ತದೆ. ಇದುರವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14 ಕಮಿಟಿಗಳನ್ನು ರಚಿಸಿ ಈ ದೃಷ್ಠಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

15 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

16 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

16 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago