ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಕಾಪು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ.
ಕಾಪುವಿನಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ಸಂಚರಿಸುತ್ತಿದ್ದ ಟಿಪ್ಪರ್ನಿಂದ ನೀರು ಇಳಿಯುತ್ತಿರುವುದು ಕಂಡುಬಂದ ಕಾರಣ ಮರಳು ಸಾಗಿಸುತ್ತಿರುವ ಬಗ್ಗೆ ಅನುಮಾನಗೊಂಡು ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 3 ಯೂನಿಟ್ ಮರಳನ್ನು ತುಂಬಿಸಿರುವುದು ಕಂಡುಬಂದಿತು
ಚಾಲಕ, ಶಿರ್ವ ನಿವಾಸಿ ಪ್ರದೀಪ್ನಲ್ಲಿ ವಿಚಾರಿಸಿದಾಗ ಶಿರ್ವ ನಿವಾಸಿ ಲತೀಫ್ಗೆ ಸೇರಿದ ಟಿಪ್ಪರ್ ಆಗಿದ್ದು ಕಳೆದ ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಬಳಿಯ ಹೊಳೆಯಿಂದ ಮರಳನ್ನು ತೆಗೆಸಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದರು.
ಲತೀಫ್ ಹಾಗೂ ಪ್ರದೀಪ್ ಜತೆ ಸೇರಿ ಲಾಭ ಮಾಡುವ ಉದ್ದೇಶದಿಂದ ಸರಕಾರಿ ಸ್ವತ್ತಾದ ಖನಿಜವನ್ನು ಕಳವು ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ ಹಾಗೂ ಮರಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…