ಉಡುಪಿ

ಕಾಪು : ಮಲ್ಲಾರು ಗ್ರಾಮದ ಅಕ್ರಮ ಕಸಾಯಿಖಾನೆಗೆ ದಾಳಿ : 12 ಲಕ್ಷಕ್ಕಿಂತ ಅಧಿಕ ಮೌಲ್ಯದ ಸೊತ್ತು ವಶ , ಇಬ್ಬರ ಸೆರೆ -Vishwanews24

ಕಾಪು : ಅಕ್ರಮ ಕಸಾಯಿಖಾನೆಗೆ ದಾಳಿ : 12 ಲಕ್ಷಕ್ಕಿಂತ ಅಧಿಕ ಮೌಲ್ಯದ ಸೊತ್ತು ವಶ , ಇಬ್ಬರ ಸೆರೆ -Vishwanews24

ಕಾಪು: ಇಲ್ಲಿಗೆ ಸಮೀಪದ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಕುಡ್ತಿಮಾರ್ ಎಂಬಲ್ಲಿಯ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕಾಪು ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ, ಎರಡು ಕಾರು, ಒಂದು ದ್ವಿಚಕ್ರ ವಾಹನ,4 ಮೊಬೈಲ್ ಹಾಗೂ ದನ ಕರುಗಳು, ಸುಮಾರು 70 ಕೆ.ಜಿ. ಮಾಂಸ ಸೇರಿದಂತೆ ಒಟ್ಟು 12,73,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ಎಸ್‌ಡಿಎಮ್‌ ಕಾಲೇಜು ಬಳಿಯ ತಾವಾ(35), ಮೂಳೂರು ನಿವಾಸಿ ಮೊಯಿದಿನಬ್ಬ (26) ಬಂಧಿತರಾಗಿದ್ದು, ನೌಷಾದ್, ಶಮೀರ್ ಎಂಬವರು ಪರಾರಿಯಾಗಿದ್ದಾರೆ.

ಮಲ್ಲಾರು ಗ್ರಾಮದ ಕುಡ್ತಿಮಾರ್ ಕೈರುನ್ನಿಸಾ ಕಾಟೇಜ್ ಹೆಸರಿನ ಮನೆಯ ಕಂಪೌಂಡಿನ ಸಮೀಪ ಅಕ್ರಮವಾಗಿ ದನ ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎನ್. ವಿಷ್ಣುವರ್ಧನ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಅವರ ನಿರ್ದೇಶನದಲ್ಲಿ ಕಾರ್ಕಳ ಉಪ ವಿಭಾಗ ಪೊಲೀಸ್ ಉಪಾಧೀಕ್ಷರಾದ ಭರತ್ ರೆಡ್ಡಿ,ಕಾಪು ಉಪ ನಿರೀಕ್ಷಕರಾದ ಮಹೇಶ್ ಪ್ರಸಾದ್ ಮಾರ್ಗದರ್ಶನದಲ್ಲಿ , ಕಾಪು ಠಾಣಾ ಪಿ.ಎಸ್.ಐ. ರಾಜಶೇಖರ್ ಬಿ. ಸಾಗನೂರ್ ಇವರಿಗೆ ದೊರೆತ ಖಚಿತ ಮಾಹಿತಿಯಂತೆ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕಾಪು ಪೊಲೀಸ್ ಉಪ ನಿರೀಕ್ಷಕರಾದ ರಾಜಶೇಖರ್ ಬಿಎಸ್,(ಕಾ-ಸೂ) ಅಪರಾಧ ವಿಭಾಗದ ಪಿಎಸೈ ಐ ಆರ್ .ಗಡ್ಡೆಕರ್ ಮತ್ತು ಸಿಬ್ಬಂದಿ ರವೀಂದ್ರ ,ಆನಂದ್,ಅರುಣ್,ಮಂಜುನಾಥ್,ಸಂದೇಶ್,ಪರಶುರಾಮ್,ಚಂದ್ರಶೇಖರ್,ಜಗದೀಶ್, ಮಹಾಬಲ ಮತ್ತು ಗೀತಾ ಭಾಗವಹಿಸಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

10 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago