ಕಾಪು: ಇಲ್ಲಿಗೆ ಸಮೀಪದ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಕುಡ್ತಿಮಾರ್ ಎಂಬಲ್ಲಿಯ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕಾಪು ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ, ಎರಡು ಕಾರು, ಒಂದು ದ್ವಿಚಕ್ರ ವಾಹನ,4 ಮೊಬೈಲ್ ಹಾಗೂ ದನ ಕರುಗಳು, ಸುಮಾರು 70 ಕೆ.ಜಿ. ಮಾಂಸ ಸೇರಿದಂತೆ ಒಟ್ಟು 12,73,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ಎಸ್ಡಿಎಮ್ ಕಾಲೇಜು ಬಳಿಯ ತಾವಾ(35), ಮೂಳೂರು ನಿವಾಸಿ ಮೊಯಿದಿನಬ್ಬ (26) ಬಂಧಿತರಾಗಿದ್ದು, ನೌಷಾದ್, ಶಮೀರ್ ಎಂಬವರು ಪರಾರಿಯಾಗಿದ್ದಾರೆ.
ಮಲ್ಲಾರು ಗ್ರಾಮದ ಕುಡ್ತಿಮಾರ್ ಕೈರುನ್ನಿಸಾ ಕಾಟೇಜ್ ಹೆಸರಿನ ಮನೆಯ ಕಂಪೌಂಡಿನ ಸಮೀಪ ಅಕ್ರಮವಾಗಿ ದನ ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎನ್. ವಿಷ್ಣುವರ್ಧನ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ ಅವರ ನಿರ್ದೇಶನದಲ್ಲಿ ಕಾರ್ಕಳ ಉಪ ವಿಭಾಗ ಪೊಲೀಸ್ ಉಪಾಧೀಕ್ಷರಾದ ಭರತ್ ರೆಡ್ಡಿ,ಕಾಪು ಉಪ ನಿರೀಕ್ಷಕರಾದ ಮಹೇಶ್ ಪ್ರಸಾದ್ ಮಾರ್ಗದರ್ಶನದಲ್ಲಿ , ಕಾಪು ಠಾಣಾ ಪಿ.ಎಸ್.ಐ. ರಾಜಶೇಖರ್ ಬಿ. ಸಾಗನೂರ್ ಇವರಿಗೆ ದೊರೆತ ಖಚಿತ ಮಾಹಿತಿಯಂತೆ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕಾಪು ಪೊಲೀಸ್ ಉಪ ನಿರೀಕ್ಷಕರಾದ ರಾಜಶೇಖರ್ ಬಿಎಸ್,(ಕಾ-ಸೂ) ಅಪರಾಧ ವಿಭಾಗದ ಪಿಎಸೈ ಐ ಆರ್ .ಗಡ್ಡೆಕರ್ ಮತ್ತು ಸಿಬ್ಬಂದಿ ರವೀಂದ್ರ ,ಆನಂದ್,ಅರುಣ್,ಮಂಜುನಾಥ್,ಸಂದೇಶ್,ಪರಶುರಾಮ್,ಚಂದ್ರಶೇಖರ್,ಜಗದೀಶ್, ಮಹಾಬಲ ಮತ್ತು ಗೀತಾ ಭಾಗವಹಿಸಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…