ಕಾಪು: ಮಂಗಳವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾಪು ಶಿಕ್ಷಣ ಸಂಸ್ಥೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು, ಅಪಘಾತದ ಭೀತಿಯುಂಟಾಗಿದೆ.
ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿನ ಪರಿಸ್ಥಿತಿ ಇದೇ ಆಗಿದೆ. ಕಾಪುವಿನಲ್ಲಿರುವ ಮಂಗಳೂರು – ಉಡುಪಿ ಹೆದ್ದಾರಿ ಮತ್ತು ಸರ್ವೀಸ್ ರಸ್ತೆಯಲ್ಲಿ ಸಂಪೂರ್ಣ ನೀರು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ.
ರಾ. ಹೆ.66 ರ ಚತುಷ್ಪಥ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿ ಬದಿಯ ಕೆಲವೆಡೆ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಸಂಚಾರಕ್ಕೆ ತೊಂದರೆಯುಂಟಾಗುತ್ತಿದೆ.
ಕಾಪು ಶಾಲೆಯ ಬಳಿಯ ಹೆದ್ದಾರಿಯಲ್ಲಿ ಕಳೆದ ಹಲವು ವರ್ಷಗಳಿಂದ ಇದೇ ರೀತಿಯ ಅಸ್ತವ್ಯಸ್ತವಾಗಿದೆ. ಸಂಬಂಧ ಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…