Featured

ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ – Vishwanews24

ಕಾಪು : ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಕಾಪು: ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಆತ್ಮಹತ್ಯೆ ಎಂಬುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದ್ದ ಶರ್ಮಿಳಾ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಪ್ರಕರಣ ವಿವರ: ಮಡುಂಬು ಕೊಲ್ಲಂಗಾಲ್ ಹೌಸ್ ನಿವಾಸಿ ಗೋಪಾಲ ಶೆಟ್ಟಿಯವರ ಪುತ್ರಿ ಹಾಗೂ ಪಿರ್ಯಾದಿದಾರರಾದ ವಿಕೇಶ್ ಶೆಟ್ಟಿಯವರ ತಂಗಿ ಶರ್ಮಿಳಾ(22)ರವರು ಕಳೆದ ಸುಮಾರು 8 ತಿಂಗಳಿನಿಂದ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಕೆ ಸುಮಾರು ಒಂದು ವಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿರುವ ವಿಚಾರ ಆಕೆಯ ಸಹದ್ಯೋಗಿಗಳಿಂದ ವಿಕೇಶ್ ಶೆಟ್ಟಿ ರವರಿಗೆ ತಿಳಿದು ಬಂದಿತ್ತು. ಸುಮಾರು 3 ದಿನಗಳಿಂದ ಆಕೆ ತಾನು ವಾಸವಿದ್ದ ಪಿಜಿಯಿಂದ ಯಾರಿಗೂ ಹೇಳದೇ ಕುಣಿಗಲ್‌ಗೆ ಹೋಗಿದ್ದಳು. ಈ ವಿಚಾರವನ್ನು ವಿಕೇಶ್ ಗೆ ಆಕೆಯ ಸ್ನೇಹಿತರು ತಿಳಿಸಿದ್ದು ಈ ಬಗ್ಗೆ ವಿಕೇಶ್ ಶೆಟ್ಟಿ ರವರು ವಾಪಾಸು ಬೆಂಗಳೂರಿಗೆ ಹೊಗುವಂತೆ ಶರ್ಮಿಳಾಗೆ ಪೋನ್ ಕರೆ ಮಾಡಿ ತಿಳಿಸಿದ್ದಾರೆ.

ಜೂನ್ ೨೮ರಂದು ಶರ್ಮಿಳಾಳು ವಿಕೇಶ್ ಶೆಟ್ಟಿ ರವರಿಗೆ ಕರೆಮಾಡಿ ತಾನು ಒಂದು ತಿಂಗಳ ಅವಧಿಗೆ ಮನೆಗೆ ಬಂದು ಹೋಗುತ್ತೇನೆಂದು ತಿಳಿಸಿದ್ದು ಅದರಂತೆ ದಿನಾಂಕ 30ರಂದು ಬೆಳಿಗ್ಗೆ 7:45ಕ್ಕೆ ಮನೆಗೆ ಬಂದಿದ್ದು ತನ್ನ ಲಗೇಜನ್ನು ಮನೆಯ ಒಳಗೆ ಇಟ್ಟು ಶೌಚಾಲಯಕ್ಕೆ ಹೋಗುತ್ತೇನೆಂದು ಹೇಳಿ ಹೋದವಳು ತುಂಬಾ ಹೊತ್ತಾದರೂ ವಾಪಾಸು ಬಾರದೇ ಇದ್ದ ಕಾರಣ ವಿಕೇಶ್ ಶೆಟ್ಟಿ ರವರು ನೆರೆಕರೆಯ ನಿವಾಸಿಗಳೊಂದಿಗೆ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದ್ದಾರೆ. ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯ ಪಕ್ಕದ ಬಾವಿಯಲ್ಲಿ ಬಿದ್ದಿರಬಹುದು ಎಂದು ಅನುಮಾನಗೊಂಡು ಸುರೇಶ ಎಂಬವರ ಮುಖಾಂತರ ಪಾತಾಳ ಗರುಡವನ್ನು ಬಾವಿಗೆ ಹಾಕಿ ಹುಡುಕಿದಾಗ ಶರ್ಮಿಳಾ ದೇಹವು ಮೇಲೆ ಬಂದಿದ್ದು ಆಕೆಯು ಮೃತಪಟ್ಟಿರುವುದಾಗಿ ಕಂಡು ಬಂತು.

ಶರ್ಮಿಳಾಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago