ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರವಾ ಗಿದ್ದು, ಅದೆಷ್ಟೋ ವರ್ಷಗಳ ತಪಸ್ಸು,ಕಠಿನ ಪರಿಶ್ರಮ ಮತ್ತು ಭಕ್ತ ಸಂದೋಹದ ಸೇವೆಯ ಫಲವಾಗಿ ಹೊಸ ಮಾರಿಗುಡಿನಿರ್ಮಾಣಗೊಂಡಿದೆ. ನಾವು ಅಮ್ಮನಿಂದ ಪಡೆದಿರುವುದನ್ನು ಅಮ್ಮನಿಗೇ ಸಮರ್ಪಿಸುವ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುತ್ತಿದ್ದೇವೆ. ಮುಂದೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋ ತ್ಸವದ ಮೂಲಕ ಅಮ್ಮನ ಆರಾಧನೆಗೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾಕುರ್ಕಿಲ್ ಬೆಟ್ಟು ಬಾಳಿಕೆ ಹೇಳಿದರು.
ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮಾತನಾಡಿ, ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ನಡೆದಿರುವ ಜೀರ್ಣೋದ್ಧಾರ ಯೋಜನೆಗಳು ನಮ್ಮೆಲ್ಲರ ಪಾಲಿಗೆ ಸಿಕ್ಕಿರುವ ದೊಡ್ಡ ಸೌಭಾಗ್ಯ. ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ. ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ ಎಂದರು.
ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನಟರಾಜ ಪರ್ಕಳ ಬರೆದಿರುವ “ನವದುರ್ಗಾ ಚರಿತಂ’ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕಚ್ಚಾರು ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಗೋಕುಲ್ದಾಸ್, ಮಲ್ಲಾರು ರಾಣೆಯರ್ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗಾರ್ಜುನ ಕಾಪು ಶುಭಾಶಂಸನೆಗೈದರು.
ಬೆಂಗಳೂರು ಸಮಿತಿ ಅಧ್ಯಕ್ಷ ಉಪೇಂದ್ರ ಶೆಟ್ಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ. ಶೆಟ್ಟಿ ಬಂಟ್ವಾಳ, ಉದ್ಯಮಿ ಯುವರಾಜ್ ಸಾಲ್ಯಾನ್ ಮಸ್ಕತ್ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಸ್ವಾಗತಿಸಿ, ಪ್ರಸ್ತಾವಿಸಿದರು. ವೇದಿಕೆ ಸಮಿತಿಯ ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿ, ಅಶೋಕ್ ಪಕಳ ವಂದಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…