Featured

ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರ : ಸಂತೋಷ ಶೆಟ್ಟಿ – vishwanews24

ಕಾಪು: ಮಾರಿಯಮ್ಮ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ

ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ..

ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ : ರತ್ನಾಕರ ಶೆಟ್ಟಿ ನಡಿಕೆರೆ

ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರವಾ ಗಿದ್ದು, ಅದೆಷ್ಟೋ ವರ್ಷಗಳ ತಪಸ್ಸು,ಕಠಿನ ಪರಿಶ್ರಮ ಮತ್ತು ಭಕ್ತ ಸಂದೋಹದ ಸೇವೆಯ ಫಲವಾಗಿ ಹೊಸ ಮಾರಿಗುಡಿನಿರ್ಮಾಣಗೊಂಡಿದೆ. ನಾವು ಅಮ್ಮನಿಂದ ಪಡೆದಿರುವುದನ್ನು ಅಮ್ಮನಿಗೇ ಸಮರ್ಪಿಸುವ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುತ್ತಿದ್ದೇವೆ. ಮುಂದೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋ ತ್ಸವದ ಮೂಲಕ ಅಮ್ಮನ ಆರಾಧನೆಗೆ ಮತ್ತಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನಾಕುರ್ಕಿಲ್‌ ಬೆಟ್ಟು ಬಾಳಿಕೆ ಹೇಳಿದರು.

ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮಾತನಾಡಿ, ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ನಡೆದಿರುವ ಜೀರ್ಣೋದ್ಧಾರ ಯೋಜನೆಗಳು ನಮ್ಮೆಲ್ಲರ ಪಾಲಿಗೆ ಸಿಕ್ಕಿರುವ ದೊಡ್ಡ ಸೌಭಾಗ್ಯ. ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ. ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ನಟರಾಜ ಪರ್ಕಳ ಬರೆದಿರುವ “ನವದುರ್ಗಾ ಚರಿತಂ’ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕಚ್ಚಾರು ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಗೋಕುಲ್‌ದಾಸ್‌, ಮಲ್ಲಾರು ರಾಣೆಯರ್‌ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗಾರ್ಜುನ ಕಾಪು ಶುಭಾಶಂಸನೆಗೈದರು.

ಬೆಂಗಳೂರು ಸಮಿತಿ ಅಧ್ಯಕ್ಷ ಉಪೇಂದ್ರ ಶೆಟ್ಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ. ಶೆಟ್ಟಿ ಬಂಟ್ವಾಳ, ಉದ್ಯಮಿ ಯುವರಾಜ್‌ ಸಾಲ್ಯಾನ್‌ ಮಸ್ಕತ್‌ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಬಾಲಾಜಿ ಸ್ವಾಗತಿಸಿ, ಪ್ರಸ್ತಾವಿಸಿದರು. ವೇದಿಕೆ ಸಮಿತಿಯ ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿ, ಅಶೋಕ್‌ ಪಕಳ ವಂದಿಸಿದರು.

 

Vishwa News 24

Recent Posts

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

17 seconds ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

17 minutes ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

44 minutes ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

52 minutes ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

1 hour ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

1 hour ago