Featured

ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ – vishwanews24

ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ..

ಮಾ. 2ರಂದು ಮಾರಿಯಮ್ಮ ದೇವಿಯ ಗದ್ದುಗೆ ಪ್ರತಿಷ್ಠೆ

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ನವ ನಿರ್ಮಾಣದ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದೆ.

ಗದ್ದುಗೆಯೇ ಪ್ರಧಾನವಾಗಿರುವ ಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿಗೆ ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಇಳಕಲ್‌ ಕೆಂಪು ಶಿಲೆಯಲ್ಲಿ ಗರ್ಭಗುಡಿಯನ್ನು ನಿರ್ಮಿಸಲಾಗಿದೆ.

ಮುಂದೆ ಗರ್ಭಗುಡಿಯೊಳಗೆ ವಿರಾಜಮಾನಗೊಳ್ಳಲಿರುವ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆಯನ್ನು ಸಮರ್ಪಿಸಿ, ಸ್ವರ್ಣ ಗದ್ದುಗೆಯಲ್ಲೇ ದೇವಿಯನ್ನು ಪ್ರತಿಷ್ಠಾಪನೆಗೊಳಿಸಬೇಕೆನ್ನುವುದು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸಂಕಲ್ಪವಾಗಿದೆ.

ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ
ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸುಮಾರು 20 ಕೆಜಿ ಚಿನ್ನದಿಂದ ಸ್ವರ್ಣ ಗದ್ದುಗೆಯನ್ನು ಸಮರ್ಪಿಸಬೇಕೆಂಬ ಸಮಿತಿಯ ಆಶಯಕ್ಕೆ ದೇವಿಯ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.ತಮ್ಮ ಶಕ್ತಾನುಸಾರವಾಗಿ ಸ್ವರ್ಣ ಸಮರ್ಪಣೆಗೆ ಮುಂದಾಗಿದ್ದು ಮುಂದಿನ ದಿನಗಳಲ್ಲಿ ಸಾಮೂಹಿಕವಾಗಿ ಸ್ವರ್ಣ ಸಮರ್ಪಣೆಗೆ ಅವಕಾಶ ನೀಡಲು ಸಮಿತಿಯ ಉದ್ದೇಶಿಸಿದೆ.

ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ
ರವಿ ಸುಂದರ್‌ ಶೆಟ್ಟಿ ಮುಂಬಯಿ (ಅಧ್ಯಕ್ಷ), ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು (ಪ್ರಧಾನ ಕಾರ್ಯಾಧ್ಯಕ್ಷ), ಕಾಪು ದಿವಾಕರ ಶೆಟ್ಟಿ ಕೋತ್ವಾಲಗುತ್ತು (ಪ್ರಧಾನ ಕಾರ್ಯದರ್ಶಿ), ಹರಿಯಪ್ಪ ಕೋಟ್ಯಾನ್‌ ಮಲ್ಪೆ, ಬಿ.ಎನ್‌. ಶಂಕರ್‌ ಪೂಜಾರಿ ಬ್ರಹ್ಮಾವರ, ರತ್ನಾಕರ ಶೆಟ್ಟಿ ನಡಿಕೆರೆ, ಪ್ರಸನ್ನ ಆಚಾರ್ಯ ಕಾಪು (ಕಾರ್ಯಾಧ್ಯಕ್ಷರು), ರವಿ ಭಟ್‌ ಮಂದಾರ (ಕಾರ್ಯದರ್ಶಿ), ಎರ್ಮಾಳು ಚಂದ್ರಹಾಸ ಶೆಟ್ಟಿ ಪುಣೆ (ಕೋಶಾಧಿಕಾರಿ) ಅವರನ್ನೊಳಗೊಂಡ ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿಯನ್ನು ರಚಿಸಲಾಗಿದೆ.

ನವದುರ್ಗಾ ಐಕ್ಯ ಸ್ವರೂಪಿಣೀ ಕಾಪು ಮಾರಿಯಮ್ಮನ ಸನ್ನಿಧಿಯ ನವ ನಿರ್ಮಾಣ ಕಾರ್ಯದಲ್ಲಿ ಒಂಬತ್ತರ ನಂಟನ್ನು ಜೋಡಿಸಿಕೊಳ್ಳಲಾಗಿದೆ. ಮಾರಿಗುಡಿ ನಿರ್ಮಾಣ ಕಾರ್ಯದಲ್ಲಿ 9, 99, 999, 9999, 99999 ಮತ್ತು ಅದಕ್ಕಿಂತ ಹೆಚ್ಚಿನ ಶಿಲಾಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗ ಸ್ವರ್ಣ ಗದ್ದುಗೆ ನಿರ್ಮಾಣ ಯೋಜನೆಯಲ್ಲೂ ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶ ನೀಡಲಾಗುವುದು.

ಮಾ. 2: ಮಾರಿಯಮ್ಮ ದೇವಿಯ ಪ್ರತಿಷ್ಠೆ
2025ರ ಮಾ. 2ರಂದು ಮಾರಿಯಮ್ಮ ದೇವಿಯ ಗದ್ದುಗೆ ಪ್ರತಿಷ್ಠೆಗೆ ದಿನ ನಿಗದಿ ಪಡಿಸಲಾಗಿದೆ. ದೇಗುಲ ಸಮರ್ಪಣೆ, ಗದ್ದುಗೆ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವದಲ್ಲಿ ಮಾರಿಗುಡಿಯ ಸಮಗ್ರ ಜೀರ್ಣೋದ್ಧಾರದ ಯೋಜನೆಗಳನ್ನು ಪೂರ್ಣಗೊಳಿಸಬೇಕೆನ್ನುವುದು ನಮ್ಮ ಆಶಯ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್‌ ಹೆಗ್ಡೆ ಕಲ್ಯ, ಪ್ರಧಾನ ಕೋಶಾಧಿಕಾರಿ ರವಿಕಿರಣ್‌, ತಂತ್ರಿಗಳು, ಅರ್ಚಕರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago