Featured

ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ – vishwanews24

ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ..

ಮಾ. 2ರಂದು ಮಾರಿಯಮ್ಮ ದೇವಿಯ ಗದ್ದುಗೆ ಪ್ರತಿಷ್ಠೆ

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ನವ ನಿರ್ಮಾಣದ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದೆ.

ಗದ್ದುಗೆಯೇ ಪ್ರಧಾನವಾಗಿರುವ ಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿಗೆ ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಇಳಕಲ್‌ ಕೆಂಪು ಶಿಲೆಯಲ್ಲಿ ಗರ್ಭಗುಡಿಯನ್ನು ನಿರ್ಮಿಸಲಾಗಿದೆ.

ಮುಂದೆ ಗರ್ಭಗುಡಿಯೊಳಗೆ ವಿರಾಜಮಾನಗೊಳ್ಳಲಿರುವ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆಯನ್ನು ಸಮರ್ಪಿಸಿ, ಸ್ವರ್ಣ ಗದ್ದುಗೆಯಲ್ಲೇ ದೇವಿಯನ್ನು ಪ್ರತಿಷ್ಠಾಪನೆಗೊಳಿಸಬೇಕೆನ್ನುವುದು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸಂಕಲ್ಪವಾಗಿದೆ.

ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ
ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ಸುಮಾರು 20 ಕೆಜಿ ಚಿನ್ನದಿಂದ ಸ್ವರ್ಣ ಗದ್ದುಗೆಯನ್ನು ಸಮರ್ಪಿಸಬೇಕೆಂಬ ಸಮಿತಿಯ ಆಶಯಕ್ಕೆ ದೇವಿಯ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.ತಮ್ಮ ಶಕ್ತಾನುಸಾರವಾಗಿ ಸ್ವರ್ಣ ಸಮರ್ಪಣೆಗೆ ಮುಂದಾಗಿದ್ದು ಮುಂದಿನ ದಿನಗಳಲ್ಲಿ ಸಾಮೂಹಿಕವಾಗಿ ಸ್ವರ್ಣ ಸಮರ್ಪಣೆಗೆ ಅವಕಾಶ ನೀಡಲು ಸಮಿತಿಯ ಉದ್ದೇಶಿಸಿದೆ.

ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ
ರವಿ ಸುಂದರ್‌ ಶೆಟ್ಟಿ ಮುಂಬಯಿ (ಅಧ್ಯಕ್ಷ), ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು (ಪ್ರಧಾನ ಕಾರ್ಯಾಧ್ಯಕ್ಷ), ಕಾಪು ದಿವಾಕರ ಶೆಟ್ಟಿ ಕೋತ್ವಾಲಗುತ್ತು (ಪ್ರಧಾನ ಕಾರ್ಯದರ್ಶಿ), ಹರಿಯಪ್ಪ ಕೋಟ್ಯಾನ್‌ ಮಲ್ಪೆ, ಬಿ.ಎನ್‌. ಶಂಕರ್‌ ಪೂಜಾರಿ ಬ್ರಹ್ಮಾವರ, ರತ್ನಾಕರ ಶೆಟ್ಟಿ ನಡಿಕೆರೆ, ಪ್ರಸನ್ನ ಆಚಾರ್ಯ ಕಾಪು (ಕಾರ್ಯಾಧ್ಯಕ್ಷರು), ರವಿ ಭಟ್‌ ಮಂದಾರ (ಕಾರ್ಯದರ್ಶಿ), ಎರ್ಮಾಳು ಚಂದ್ರಹಾಸ ಶೆಟ್ಟಿ ಪುಣೆ (ಕೋಶಾಧಿಕಾರಿ) ಅವರನ್ನೊಳಗೊಂಡ ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿಯನ್ನು ರಚಿಸಲಾಗಿದೆ.

ನವದುರ್ಗಾ ಐಕ್ಯ ಸ್ವರೂಪಿಣೀ ಕಾಪು ಮಾರಿಯಮ್ಮನ ಸನ್ನಿಧಿಯ ನವ ನಿರ್ಮಾಣ ಕಾರ್ಯದಲ್ಲಿ ಒಂಬತ್ತರ ನಂಟನ್ನು ಜೋಡಿಸಿಕೊಳ್ಳಲಾಗಿದೆ. ಮಾರಿಗುಡಿ ನಿರ್ಮಾಣ ಕಾರ್ಯದಲ್ಲಿ 9, 99, 999, 9999, 99999 ಮತ್ತು ಅದಕ್ಕಿಂತ ಹೆಚ್ಚಿನ ಶಿಲಾಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗ ಸ್ವರ್ಣ ಗದ್ದುಗೆ ನಿರ್ಮಾಣ ಯೋಜನೆಯಲ್ಲೂ ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶ ನೀಡಲಾಗುವುದು.

ಮಾ. 2: ಮಾರಿಯಮ್ಮ ದೇವಿಯ ಪ್ರತಿಷ್ಠೆ
2025ರ ಮಾ. 2ರಂದು ಮಾರಿಯಮ್ಮ ದೇವಿಯ ಗದ್ದುಗೆ ಪ್ರತಿಷ್ಠೆಗೆ ದಿನ ನಿಗದಿ ಪಡಿಸಲಾಗಿದೆ. ದೇಗುಲ ಸಮರ್ಪಣೆ, ಗದ್ದುಗೆ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವದಲ್ಲಿ ಮಾರಿಗುಡಿಯ ಸಮಗ್ರ ಜೀರ್ಣೋದ್ಧಾರದ ಯೋಜನೆಗಳನ್ನು ಪೂರ್ಣಗೊಳಿಸಬೇಕೆನ್ನುವುದು ನಮ್ಮ ಆಶಯ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್‌ ಹೆಗ್ಡೆ ಕಲ್ಯ, ಪ್ರಧಾನ ಕೋಶಾಧಿಕಾರಿ ರವಿಕಿರಣ್‌, ತಂತ್ರಿಗಳು, ಅರ್ಚಕರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago