Featured

ಕಾಪು : ಮಾ.13 ರಂದು ಪೊಲಿಪು ದರ್ಗಾ ಉರೂಸ್, ಹಾಗೂ ಮಾ. 14 ರಂದು ಖಾಝಿ ಸ್ವೀಕಾರ -Vishwanews24

ಕಾಪು : ಮಾ.13 ರಂದು ಪೊಲಿಪು ದರ್ಗಾ ಉರೂಸ್, ಹಾಗೂ ಮಾ. 14 ರಂದು ಖಾಝಿ ಸ್ವೀಕಾರ -Vishwanews24

ಕಾಪು: ನಗರದ ಸಯ್ಯದ್ ಶಂಸುದ್ದೀನ್ ವಲಿಯುಲ್ಲಾಹಿರವರ ದರ್ಗಾದ ಉರೂಸ್ ಕಾರ್ಯಕ್ರಮವು ಮಾರ್ಚ್ 13 ರಂದು ನಡೆಯಲಿದೆ ಎಂದು ಜಮಾತ್ ಕಮಿಟಿ ಉಪಾಧ್ಯಕ್ಷ ಅಮೀರ್ ಹಂಝ ಹೇಳಿದ್ದಾರೆ.

ಕಾಪು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಅಲ್ ಹಾಜ್ ಪಿ.ಬಿ ಅಹಮದ್ ಮುಸ್ಲಿಯಾರ್(ಕಾಪು ಉಸ್ತಾದ್) ಇವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆ ಬಳಿಕ ಸಂದಲ್ ಮೆರವಣಿಗೆ ನಡೆಯಲಿದ್ದು, ಮಗ್ರಿಬ್ ನಮಾಝಿನ ಬಳಿಕ ಸೈಯದ್ ಶಂಸುದ್ದೀನ್ ವಲಿಯುಲ್ಲಾರವರ ಕುಟುಂಬಸ್ಥರಾದ ಸೈಯದ್ ಸಿರಾಜುದ್ದೀನ್ ಬಾ ಅಲವಿ ತಂಗಲ್ ರವರ ನೇತೃತ್ವದಲ್ಲಿ ಸಾಮೂಹಿಕ ಕೂಟು ಝಿಯಾರತ್ ನೆರವೇರಲಿದೆ ಎಂದರು.

ಉಚ್ಚಿಲ-ಪಣಿಯೂರು : 7 ಕೋಟಿ ರೂ. ಅನುದಾನದ ದ್ವಿಪಥ ರಸ್ತೆ ಕಾಮಗಾರಿಯ ಅವ್ಯವಸ್ಥೆ; ವ್ಯಾಪಾರಸ್ಥರು, ನಿವಾಸಿಗಳಿಗೆ ಧೂಳು ತಿನ್ನುವ ಸಂಕಟ, ವಾಹನ ಸವಾರರಿಗೆ ಸಂಚಾರದ ಸಂಕಟ -Vishwanews24

ಸಭಾ ಕಾರ್ಯಕ್ರಮವನ್ನು ಅಲ್ ಹಾಜ್ ಪಿಬಿ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಜಿ ಅಮೀರ್ ಹಂಝ ಇವರು ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮಾಸ್ಟರ್ ಅವರನ್ನು ಸ್ವಾಗತಿಸಲಿದ್ದಾರೆ. ಇಶಾ ನಮಾಜಿನ ಬಳಿಕ ಬಹು ಹುಸೇನ್ ಅಹ್ಸನಿ ಮೂಈನ್ ಇವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದರು.

ಪೊಲಿಪು ಜಾಮಿಯಾ ಮಸೀದಿಯಲ್ಲಿ ಕಳೆದ ಸುಮಾರು 52 ವರ್ಷಗಳ ಕಾಲ ಧಾರ್ಮಿಕ ಸೇವೆಯನ್ನು ಮಾಡಿರುವಂತಹ ಪಿಬಿ ಅಹ್ಮದ್ ಮುಸ್ಲಿಯಾರ್( ಕಾಪು ಉಸ್ತಾದ್) ಇವರನ್ನು ಕಾಪು ಮೊಹಲ್ಲಾದ ಖಾಝಿ ಯಾಗಿ ನೇಮಕ ಮಾಡಲು ಜಮಾತ್ ಬಾಂಧವರು ತೀರ್ಮಾನಿಸಿದ್ದು, ಅದರಂತೆ ಮಾರ್ಚ್ 14 ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿಯವರಾದ ಬಹುಮಾನ್ಯ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ರವರ ನೇತೃತ್ವದಲ್ಲಿ ಪಿಬಿ ಅಹ್ಮದ್ ಮುಸ್ಲಿಯಾರ್( ಕಾಪು ಉಸ್ತಾದ್) ಇವರು ಖಾಝಿ ಸ್ವೀಕಾರ ಮಾಡಲಿದ್ದಾರೆ.

ಉಡುಪಿ : ಸೇನಾ ನೇಮಕಾತಿ ರ‍್ಯಾಲಿಗೆ ಸಂಪೂರ್ಣ ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಈ ಸಂದರ್ಭದಲ್ಲಿ ಸಯ್ಯದ್ ಜಾಫರ್ ಅಸ್ಸಖಾಫ್ ತಂಙಲ್ ಕೋಟೇಶ್ವರ ರವರು ದುಆ ಮಾಡಲಿದ್ದಾರೆ. ಈ ಕಾರ್ಯಕ್ರಮವನ್ನು ಸೈಯದ್ ಕೆಪಿಎಸ್ ಝೈನುಲ್ ಆಬಿದೀನ್ ಜಮಾಲುಲ್ಲೈಲ್ ತಂಙಳ್ ಕಾಜೂರು ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಂಯುಕ್ತ ಜಮಾತ್ ಸಹಾಯಕ ಖಾಝಿಯವರಾದ ಅಬೂ ಶಾಕಿರ್ ಅಬ್ದುಲ್ ರಹಮಾನ್ ಮದನಿ ಮೂಳೂರು ಹಾಗೂ ಸಂಯುಕ್ತ ಜಮಾತ್ ಅಧ್ಯಕ್ಷರಾದ ಹಾಜಿ ಅಬೂಬಕ್ಕರ್ ನೇಜಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಜಿ ಅಮೀರ್ ಹಂಝ ಇವರು ವಹಿಸಲಿದ್ದು,ಸ್ಥಳೀಯ ಎಲ್ಲಾ ಮಸೀದಿಗಳ ಖತೀಬರುಗಳು ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

20 hours ago