Featured

ಕಾಪು : ಮಾ. 20ರಂದು ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ನಬಾರ್ಡ್ ನಿಯೋಜಿತ ತಂಡ ಭೇಟಿ -Vishwanews24

ಕಾಪು : ಮಾ. 20ರಂದು ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ನಬಾರ್ಡ್ ನಿಯೋಜಿತ ತಂಡ ಭೇಟಿ -Vishwanews24

ಕಾಪು: ನಬಾರ್ಡ್ ನಿಯೋಜಿತ ಅಧ್ಯಯನ ತಂಡವು ಕಾಪು ತಾಲ್ಲೂಕಿನ ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ಮಾ. 20ರಂದು ಭೇಟಿ ನೀಡಲಿದೆ.

ನಬಾರ್ಡ್ ನಿಯೋಜಿತ ಅಧ್ಯಯನ ತಂಡವು 2 ದಿನಗಳ ಅಧ್ಯಯನಕ್ಕಾಗಿ ಅವಿಭಜಿತ ದ.ಕ. ಜಿಲ್ಲೆಗೆ ಆಗಮಿಸಲಿದ್ದು, ಕಳೆದ 5 ವರ್ಷಗಳಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧಿಸಿದ ಅದ್ಭುತ ಪ್ರಗತಿಯ ಹಿನ್ನೆಲೆಯಲ್ಲಿ ಮಾ.20ರ ಸಂಜೆ ಪಡುಬಿದ್ರಿ ಸೇವಾ ಸಹಕಾರಿ ಸೊಸೈಟಿಗೆ ಭೇಟಿ ನೀಡಲಿದೆ.

ಅಧ್ಯಯನ ತಂಡದಲ್ಲಿ ಕಾರ್ಮಿಕ ಸಚಿವ ಅರಬೈಲು ಶಿವರಾಮ ಹೆಬ್ಬಾರ್ ಸಹಿತ ರಾಜ್ಯದ ನಾನಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳ ಅಧ್ಯಕ್ಷರು-ನಿರ್ದೇಶಕರು, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ 24 ಮಂದಿ ಇದ್ದಾರೆ.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಈ ಸಂದರ್ಭ ಅಧ್ಯಯನ ತಂಡವನ್ನು ಪಡುಬಿದ್ರಿ ಬಸ್ಸು ನಿಲ್ದಾಣದಲ್ಲಿ ಸ್ವಾಗತಿಸಿ ಕೋವಿಡ್ ನಿಯಮಾನುಸಾರ ಸಾಮಾಜಿಕ ಅಂತರದೊಂದಿಗೆ ಮೆರವಣಿಗೆ ಮೂಲಕ ಬ್ಯಾಂಕ್ ಆವರಣಕ್ಕೆ ಕರೆದೊಯ್ಯಲಾಗುವುದು.

ತಂಡವು ಪಡುಬಿದ್ರಿ ಸೊಸೈಟಿಯ ಕೇಂದ್ರ ಕಛೇರಿ, ಶಾಖಾ ಕಛೇರಿಗಳಿಗೆ ಭೇಟಿ ನೀಡಲಿದೆ. ಬಳಿಕ ತಂಡಕ್ಕೆ ಪಡುಬಿದ್ರಿ ಸೊಸೈಟಿಯ ಕಳೆದ 5 ವರ್ಷಗಳ ಆರ್ಥಿಕ ಪ್ರಗತಿ, ಕಾರ್ಯವೈಖರಿ ಸಹಿತ ಸಮಗ್ರ ಮಾಹಿತಿಯನ್ನು ಸಾಕ್ಷ್ಯ ಚಿತ್ರ ಮೂಲಕ ಮನದಟ್ಟು ಮಾಡಲಾಗುವುದು. ನಂತರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24

ಇದೇ ವೇಳೆ ಅಧ್ಯಯನ ತಂಡವು ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಬೆಳಪು ಸೊಸೈಟಿಗೆ ಭೇಟಿ ನೀಡಲಿದ್ದು, ನಬಾರ್ಡ್ ಯೋಜನೆಯ ಬಗ್ಗೆ ಅಧ್ಯಯನ ನಡೆಸಲಿದೆ. ಅಲ್ಲಿಂದ ತಂಡವು ಮೂಳೂರು ಸಾಯಿರಾಧಾ ಹೆರಿಟೇಜ್‍ಗೆ ಭೇಟಿ ನೀಡಲಿದೆ. ಅಲ್ಲಿ ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

11 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

12 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago