ಕಾಪು : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಹಾಗೂ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇದೇ ಮಾ.31ರಿಂದ ಎಪ್ರಿಲ್ 3ರವರೆಗೆ ಶ್ರೀಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಿಲಾಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. ಮಾರ್ಚ್ 26ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200ಕೆಜಿ ತೂಕದ ಪಂಚಲೋಹ ಮೂರ್ತಿಯನ್ನು ಶ್ರೀ ಕ್ಷೇತ್ರಕ್ಕೆ ತರಲಾಗುತ್ತದೆ ಎಂದರು.
ಇದನ್ನೂ ಓದಿ:
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವೀಣಾ ಎಸ್. ಶೆಟ್ಟಿ, ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ವಿಜಯ ಕೊಡವೂರು, ಇದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…