Featured

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್  – Vishwanews24

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್

ಕಾಪು ವಿಧಾನಸಭಾ ಕ್ಷೇತ್ರದ ಮದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬಹುಮತವಿದ್ದರೂ, ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕಳಕೊಂಡು, ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು, ಬಿಜೆಪಿ ಬೆಂಬಲಿತ 10 ಮತ್ತು ಕಾಂಗ್ರೆಸ್ ಬೆಂಬಲಿತ 5 ಸದಸ್ಯರಿದ್ದಾರೆ. ಇಂದು ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಆದರೆ 10 ಸದಸ್ಯರ ಬಲವಿದ್ದರೂ, ಪರಿಶಿಷ್ಟ ಜಾತಿ ಮಹಿಳೆ ಬಿಜೆಪಿಯಲ್ಲಿ ಇಲ್ಲದಿರುವುದರಿಂದ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ. ಕೇವಲ 5 ಸದಸ್ಯ ಬಲವಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆದ್ದುಕೊಂಡು ಸಂಭ್ರಮಿಸಿದೆ. ಪರಿಶಿಷ್ಟ ಜಾತಿ ಮೀಸಲಾತಿಯಿಂದಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ನಮಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಮೋಹಿನಿ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತವಿದ್ದ ರೂ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕಳೆದು ಕೊಂಡು ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ತೃಪ್ತಿ ಪಡುವಂತಾಗಿದೆ.

ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡಕೊಂಡ ಕಾಂಗ್ರೆಸ್ ಮುದರಂಗಡಿಯಲ್ಲಿ ಭರ್ಜರಿ ವಿಜಯೋತ್ಸವ ಆಚರಿಸಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ತಾಲೂಕ್ ಪಂಚಾಯತ್ ಸದಸ್ಯ ಮೈಕಲ್ ಡಿಸೋಜಾ, ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago