ಕಾಪು: ಇಲ್ಲಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯ ವರೆಗೆ ಮುಂದುವರಿಯಲಿದೆ.
ಮಂಗಳವಾರ ರಾತ್ರಿ ಹಳೇ ಮಾರಿಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಸ್ವರ್ಣಾಭರಣಗಳನ್ನು ಮೆರವಣಿಗೆಯ ಮೂಲಕ ತಂದು, ಬಳಿಕ ಹೊಂಗಾರಕನ ಮರದಲ್ಲಿ ಕೆತ್ತಿದ ಮೂರ್ತಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ, ವಿವಿಧ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.
ಬುಧವಾರ ಸಂಜೆ ತೆರೆ
ಮಂಗಳವಾರ ಮಧ್ಯರಾತ್ರಿಯ ಬಳಿಕ ದರ್ಶನ ಸೇವೆ ನಡೆದು, ಬುಧ ವಾರ ಮಧ್ಯಾಹ್ನದ ವರೆಗೆ ಭಕ್ತರಿಗೆ ಮಾರಿಯಮ್ಮ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬುಧವಾರದ ಮಧ್ಯಾಹ್ನ ಪೂಜೆ ನಡೆದು, ಸಂಜೆ ದರ್ಶನ ಸೇವೆ ನಡೆಯುತ್ತದೆ. ಅಭಯ ಪ್ರಸಾದ ವಿತರಣೆ ಬಳಿಕ ದೇವಿಯ ಮೂರ್ತಿ ಯನ್ನು ಮೆರ ವಣಿಗೆಯಲ್ಲಿ ಒಯ್ದು, ವಿಸರ್ಜಿಸಲಾಗುತ್ತದೆ.
ಗದ್ದಿಗೆ ಪೂಜೆ ವಿಶೇಷ
ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದಿಗೆಪೂಜೆ ವಿಶೇಷವಾಗಿದ್ದು, ಹೂವಿನ ಪೂಜೆ, ಕುಂಕುಮಾರ್ಚನೆ ಸಹಿತ ವಿವಿಧ ಸೇವೆಗಳು, ಹರಕೆಗಳು ಸಮರ್ಪಿಸಲ್ಪಡುತ್ತವೆ. 3 ಮಾರಿಗುಡಿ ಗಳನ್ನೂ ವಿಶೇಷವಾಗಿ ಅಲಂಕರಿಸಲಾಗಿದೆ. ಸುಮಾರು 200ಕ್ಕೂ ಅಧಿಕ ಮಾರಾಟ ಮಳಿಗೆ ಗಳು ಆಕರ್ಷಿಸುತ್ತಿವೆ.
ಸ್ವರ್ಣ ಮುಖ ಸಿಂಹ ವಾಹನ ಸಮರ್ಪಣೆ
ಮುಂಬಯಿಯ ಸುನೀತಾ ಎಸ್. ಕಾಮತ್ ಮತ್ತು ಇತರ ಭಕ್ತರ ದೇಣಿಗೆಯೊಂದಿಗೆ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ ಗೊಂಡಿತು. ಸ್ವರ್ಣ ಮುಖ ಸಿಂಹವಾಹನದ ಪುರಪ್ರವೇಶ ಶೋಭಾಯಾತ್ರೆಯ ಬಳಿಕ ದೇವಿಯ ರಜತ ರಥೋತ್ಸವ ನಡೆಯಿತು. ವಿವಿಧ ಕಲಾತಂಡಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು.
ಶಿಲಾ ಸೇವೆ ಸಮರ್ಪಣೆ
ಹೊಸ ಮಾರಿಗುಡಿಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಮಂದಿ ಶಿಲಾ ಸೇವೆ ಸಮರ್ಪಣೆ ಯಲ್ಲಿ ಪಾಲ್ಗೊಂಡಿದ್ದಾರೆ.
ಬಿಗು ಬಂದೋಬಸ್ತ್ ಆದ್ಯತೆ
ಮೂರೂ ಮಾರಿಗುಡಿಗಳ ಸುತ್ತಲೂ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯಾಡಳಿತದಿಂದ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…