Featured

ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಕಾಲಾವಧಿ ಸುಗ್ಗಿ ಮಾರಿಪೂಜೆ – Vishwanews24

ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಸುಗ್ಗಿ ಮಾರಿಪೂಜೆ

ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ

ಕಾಪು: ಇಲ್ಲಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯ ವರೆಗೆ ಮುಂದುವರಿಯಲಿದೆ.

ಮಂಗಳವಾರ ರಾತ್ರಿ ಹಳೇ ಮಾರಿಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಸ್ವರ್ಣಾಭರಣಗಳನ್ನು ಮೆರವಣಿಗೆಯ ಮೂಲಕ ತಂದು, ಬಳಿಕ ಹೊಂಗಾರಕನ ಮರದಲ್ಲಿ ಕೆತ್ತಿದ ಮೂರ್ತಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ, ವಿವಿಧ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.

ಬುಧವಾರ ಸಂಜೆ ತೆರೆ
ಮಂಗಳವಾರ ಮಧ್ಯರಾತ್ರಿಯ ಬಳಿಕ ದರ್ಶನ ಸೇವೆ ನಡೆದು, ಬುಧ ವಾರ ಮಧ್ಯಾಹ್ನದ ವರೆಗೆ ಭಕ್ತರಿಗೆ ಮಾರಿಯಮ್ಮ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬುಧವಾರದ ಮಧ್ಯಾಹ್ನ ಪೂಜೆ ನಡೆದು, ಸಂಜೆ ದರ್ಶನ ಸೇವೆ ನಡೆಯುತ್ತದೆ. ಅಭಯ ಪ್ರಸಾದ ವಿತರಣೆ ಬಳಿಕ ದೇವಿಯ ಮೂರ್ತಿ ಯನ್ನು ಮೆರ ವಣಿಗೆಯಲ್ಲಿ ಒಯ್ದು, ವಿಸರ್ಜಿಸಲಾಗುತ್ತದೆ.

ಗದ್ದಿಗೆ ಪೂಜೆ ವಿಶೇಷ
ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದಿಗೆಪೂಜೆ ವಿಶೇಷವಾಗಿದ್ದು, ಹೂವಿನ ಪೂಜೆ, ಕುಂಕುಮಾರ್ಚನೆ ಸಹಿತ ವಿವಿಧ ಸೇವೆಗಳು, ಹರಕೆಗಳು ಸಮರ್ಪಿಸಲ್ಪಡುತ್ತವೆ. 3 ಮಾರಿಗುಡಿ ಗಳನ್ನೂ ವಿಶೇಷವಾಗಿ ಅಲಂಕರಿಸಲಾಗಿದೆ. ಸುಮಾರು 200ಕ್ಕೂ ಅಧಿಕ ಮಾರಾಟ ಮಳಿಗೆ ಗಳು ಆಕರ್ಷಿಸುತ್ತಿವೆ.

ಸ್ವರ್ಣ ಮುಖ ಸಿಂಹ ವಾಹನ ಸಮರ್ಪಣೆ
ಮುಂಬಯಿಯ ಸುನೀತಾ ಎಸ್‌. ಕಾಮತ್‌ ಮತ್ತು ಇತರ ಭಕ್ತರ ದೇಣಿಗೆಯೊಂದಿಗೆ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ ಗೊಂಡಿತು. ಸ್ವರ್ಣ ಮುಖ ಸಿಂಹವಾಹನದ ಪುರಪ್ರವೇಶ ಶೋಭಾಯಾತ್ರೆಯ ಬಳಿಕ ದೇವಿಯ ರಜತ ರಥೋತ್ಸವ ನಡೆಯಿತು. ವಿವಿಧ ಕಲಾತಂಡಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು.

ಶಿಲಾ ಸೇವೆ ಸಮರ್ಪಣೆ
ಹೊಸ ಮಾರಿಗುಡಿಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಮಂದಿ ಶಿಲಾ ಸೇವೆ ಸಮರ್ಪಣೆ ಯಲ್ಲಿ ಪಾಲ್ಗೊಂಡಿದ್ದಾರೆ.

ಬಿಗು ಬಂದೋಬಸ್ತ್ ಆದ್ಯತೆ
ಮೂರೂ ಮಾರಿಗುಡಿಗಳ ಸುತ್ತಲೂ ಬಿಗು ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯಾಡಳಿತದಿಂದ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago