Featured

ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಕಾಲಾವಧಿ ಸುಗ್ಗಿ ಮಾರಿಪೂಜೆ – Vishwanews24

ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಸುಗ್ಗಿ ಮಾರಿಪೂಜೆ

ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ

ಕಾಪು: ಇಲ್ಲಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯ ವರೆಗೆ ಮುಂದುವರಿಯಲಿದೆ.

ಮಂಗಳವಾರ ರಾತ್ರಿ ಹಳೇ ಮಾರಿಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಸ್ವರ್ಣಾಭರಣಗಳನ್ನು ಮೆರವಣಿಗೆಯ ಮೂಲಕ ತಂದು, ಬಳಿಕ ಹೊಂಗಾರಕನ ಮರದಲ್ಲಿ ಕೆತ್ತಿದ ಮೂರ್ತಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ, ವಿವಿಧ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.

ಬುಧವಾರ ಸಂಜೆ ತೆರೆ
ಮಂಗಳವಾರ ಮಧ್ಯರಾತ್ರಿಯ ಬಳಿಕ ದರ್ಶನ ಸೇವೆ ನಡೆದು, ಬುಧ ವಾರ ಮಧ್ಯಾಹ್ನದ ವರೆಗೆ ಭಕ್ತರಿಗೆ ಮಾರಿಯಮ್ಮ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬುಧವಾರದ ಮಧ್ಯಾಹ್ನ ಪೂಜೆ ನಡೆದು, ಸಂಜೆ ದರ್ಶನ ಸೇವೆ ನಡೆಯುತ್ತದೆ. ಅಭಯ ಪ್ರಸಾದ ವಿತರಣೆ ಬಳಿಕ ದೇವಿಯ ಮೂರ್ತಿ ಯನ್ನು ಮೆರ ವಣಿಗೆಯಲ್ಲಿ ಒಯ್ದು, ವಿಸರ್ಜಿಸಲಾಗುತ್ತದೆ.

ಗದ್ದಿಗೆ ಪೂಜೆ ವಿಶೇಷ
ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದಿಗೆಪೂಜೆ ವಿಶೇಷವಾಗಿದ್ದು, ಹೂವಿನ ಪೂಜೆ, ಕುಂಕುಮಾರ್ಚನೆ ಸಹಿತ ವಿವಿಧ ಸೇವೆಗಳು, ಹರಕೆಗಳು ಸಮರ್ಪಿಸಲ್ಪಡುತ್ತವೆ. 3 ಮಾರಿಗುಡಿ ಗಳನ್ನೂ ವಿಶೇಷವಾಗಿ ಅಲಂಕರಿಸಲಾಗಿದೆ. ಸುಮಾರು 200ಕ್ಕೂ ಅಧಿಕ ಮಾರಾಟ ಮಳಿಗೆ ಗಳು ಆಕರ್ಷಿಸುತ್ತಿವೆ.

ಸ್ವರ್ಣ ಮುಖ ಸಿಂಹ ವಾಹನ ಸಮರ್ಪಣೆ
ಮುಂಬಯಿಯ ಸುನೀತಾ ಎಸ್‌. ಕಾಮತ್‌ ಮತ್ತು ಇತರ ಭಕ್ತರ ದೇಣಿಗೆಯೊಂದಿಗೆ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ ಗೊಂಡಿತು. ಸ್ವರ್ಣ ಮುಖ ಸಿಂಹವಾಹನದ ಪುರಪ್ರವೇಶ ಶೋಭಾಯಾತ್ರೆಯ ಬಳಿಕ ದೇವಿಯ ರಜತ ರಥೋತ್ಸವ ನಡೆಯಿತು. ವಿವಿಧ ಕಲಾತಂಡಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು.

ಶಿಲಾ ಸೇವೆ ಸಮರ್ಪಣೆ
ಹೊಸ ಮಾರಿಗುಡಿಯಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಮಂದಿ ಶಿಲಾ ಸೇವೆ ಸಮರ್ಪಣೆ ಯಲ್ಲಿ ಪಾಲ್ಗೊಂಡಿದ್ದಾರೆ.

ಬಿಗು ಬಂದೋಬಸ್ತ್ ಆದ್ಯತೆ
ಮೂರೂ ಮಾರಿಗುಡಿಗಳ ಸುತ್ತಲೂ ಬಿಗು ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯಾಡಳಿತದಿಂದ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago