ಕಾಪು ಮೂಳೂರು ದನದ ಮಾಂಸ ಸಾಗಿಸುತ್ತಿದ್ದವರನ್ನು ಬಂಧಿಸಿದ ಕಾಪು ಪೋಲಿಸರು.vishwanews24

ಕಾಪು: ದಿನಾಂಕ 08/04/2020 ರಂದು ರಾತ್ರಿ 9:00 ಗಂಟೆಗೆ ಇವರಿಗೆ ಸ್ಕೂಟರ್ ನಲ್ಲಿ ದನದ ಮಾಂಸವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಮೂಳೂರು ಗ್ರಾಮದ ಗೋಲ್ಡನ್ ಜನರಲ್ ಸ್ಟೋರ್ ಸಮೀಪ ಮಂಗಳೂರು ಉಡುಪಿ ರಾ.ಹೆ 66 ರಲ್ಲಿ ಸಿಬ್ಬಂದಿಯವರೊಂದಿಗೆ ವಾಹನ ತಪಾಸಣೆ ನಡೆಸುತ್ತಿರುವಾಗ  ರಾತ್ರಿ 09:15 ಗಂಟೆ ಸಮಯಕ್ಕೆ ಕಾಪು ಕಡೆಯಿಂದ ವಿರುದ್ದ ದಿಕ್ಕಿನಲ್ಲಿ ಆರೋಪಿಗಳ ಸ್ಕೂಟರ್ ನಂಬ್ರ KA-19-ET-4150 ಬಂದಿದ್ದು ಅವರುಗಳನ್ನು ನಿಲ್ಲಿಸಿ ವಿಚಾರಿಸಿದಲ್ಲಿ ಸ್ಕೂಟರ್ ಸವಾರ ತನ್ನ ಹೆಸರು ಮೊಹಮ್ಮದ್ ಸಫ್ವಾನ್ (23), ತಂದೆ: ರಫೀಕ್,ವಾಸ: 7 ನೇ ಬ್ಲಾಕ್ ಕೃಷ್ಣಪುರ ಸುರತ್ಕಲ್ ಮಂಗಳೂರು ಎಂದು ಸಹಸವಾರನನ್ನು ತನ್ನ ಹೆಸರು ಆಸ್ಗರ್ ಆಲಿ(39) ತಂದೆ: ಇದಿನಬ್ಬ, ವಾಸ: 7 ನೇ ಬ್ಲಾಕ್, ಕೃಷ್ಣಾಪುರ, ಸುರತ್ಕಲ್ ಮಂಗಳೂರು ಎಂದು ತಿಳಿಸಿದ್ದು ಸ್ಕೂಟರ್  ಪರಿಶೀಲಿಸಿದಲ್ಲಿ ಸ್ಕೂಟರ್ ನ ಸೀಟಿನ ಕೆಳಭಾಗದಲ್ಲಿ 7 ಪ್ಲಾಸ್ಟಿಕ್ ಕವರನಲ್ಲಿ ಮಾಂಸಗಳಿದ್ದು ಸದ್ರಿ ಮಾಂಸದ ಬಗ್ಗೆ ವಿಚಾರಿಸಿದಲ್ಲಿ ದನದ ಮಾಂಸವೆಂದು ತಿಳಿಸಿದ್ದು, ಮಾಂಸ ಸಾಗಾಟ ಬಗ್ಗೆ ಪರವಾನಿಗೆ ಇದೆಯೇ ಎಂದು ವಿಚಾರಿಸಿದಲ್ಲಿ ಯಾವುದೇ ಪರವಾನಿಗೆ ಇರುವುದಿಲ್ಲವೆಂದು ತಿಳಿಸಿದ್ದು ಆರೋಪಿಗಳನ್ನು ದಸ್ತಗಿರಿ ಮಾಡಿ, ದನದ ಮಾಂಸ ಸಾಗಾಟಕ್ಕೆ ಬಳಸಿದ ಸ್ಕೂಟರ್ ಒಂದೊಂದು ಕೆಜಿಯ 07 ಪ್ಲಾಸ್ಟಿಕ್ ಕವರ್ ಗಳಲ್ಲಿದ್ದ 07 ಕೆ.ಜಿ. ದನದ ಮಾಂಸವನ್ನು ಸ್ವಾಧೀನ ಪಡಿಸಿಕೊಂಡಿದ್ದು ಆರೋಪಿಗಳು ಕೋವಿದ್-19 (ಕರೋನಾ ವೈರಸ್)  ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಲಾಕ್ ಡೌನ್ ಆದೇಶ ಇದ್ದು ಯಾವುದೇ ಸಕಾರಣವಿಲ್ಲದೇ ಸಂಚರಿಸದಂತೆ ಸರಕಾರದ ಆದೇಶ ಇದ್ದರೂ ಮಾನವ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕು ಹರಡುವ ಸಾಧ್ಯತೆ ಇದೆ ಎನ್ನುವ ವಿಷಯ ತಿಳಿದು ಸ್ಕೂಟರ್ ನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ದನದ ಮಾಂಸವನ್ನು ಸಾಗಾಟ ಮಾಡುತ್ತಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 52/2020 ಕಲಂ: 269 ಐಪಿಸಿ., ಕಲಂ 11 ಕರ್ನಾಟಕ ಗೋಹತ್ಯಾ ಪ್ರತಿಬಂಧಕ ಮತ್ತು ಜನುವಾರು ಸಂರಕ್ಷಣಾ ಕಾಯ್ದೆ 1964 ಮತ್ತು ಸೆಕ್ಷನ್‌ 66 ಜೊತೆಗೆ 192(ಎ) ಐ.ಎಮ್.ವಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

17 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

18 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

18 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

19 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

19 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

19 hours ago