ಕಾಪು :ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತಂದೆ ತುಳಸಿ ಸಾಲ್ಯಾನ್ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.
ಕಾಣೆಯಾದ ಬೆನ್ನಲ್ಲೇ ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಕಾಪು ಸುತ್ತಮುತ್ತಲಿನ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…