ಕಾಪು :ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತಂದೆ ತುಳಸಿ ಸಾಲ್ಯಾನ್ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.
ಕಾಣೆಯಾದ ಬೆನ್ನಲ್ಲೇ ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಕಾಪು ಸುತ್ತಮುತ್ತಲಿನ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…