ಕಾಪು :ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತಂದೆ ತುಳಸಿ ಸಾಲ್ಯಾನ್ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.
ಕಾಣೆಯಾದ ಬೆನ್ನಲ್ಲೇ ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಕಾಪು ಸುತ್ತಮುತ್ತಲಿನ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕಾಪುವಿನ ಸಮಾಜಸೇವಕ ಸೂರಿ ಶೆಟ್ಟಿಯವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…