ಉಡುಪಿ

ಕಾಪು ರವಿಶಂಕರ್ ಗುರೂಜಿ ಆನಂದಲಹರಿ ಕಾರ್ಯಕ್ರಮ ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ : ಕಡ್ಡಾಯವಾಗಿ ಸ್ಟೀಲ್ ಹಾಗೂ ಪೇಪರ್ ಗ್ಲಾಸ್ ನಲ್ಲಿ ಕುಡಿಯುವ ನೀರು ವಿತರಣೆ:vishwanews24

ಕಾಪು ರವಿಶಂಕರ್ ಗುರೂಜಿ ಆನಂದಲಹರಿ ಕಾರ್ಯಕ್ರಮ ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ : ಕಡ್ಡಾಯವಾಗಿ ಸ್ಟೀಲ್ ಹಾಗೂ ಪೇಪರ್ ಗ್ಲಾಸ್ ನಲ್ಲಿ ಕುಡಿಯುವ ನೀರು ವಿತರಣೆ:vishwanews24

ಕಾಪು: ರವಿಶಂಕರ್ ಗುರೂಜಿಯವರ ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ಪೂರ್ಣಗೊಂಡಿದ್ದು ಇಂದು ರಾತ್ರಿ ಕಾಪುವಿನ ಮಂಥನ್ ರೆಸಾರ್ಟಿಗೆ ಆಗಮಿಸಿ ರಾತ್ರಿ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ.

ನಾಳೆ ಬೆಳಗ್ಗೆ 9:30 ಗಂಟೆಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸವನ್ನ ವೀಕ್ಷಿಸಲಿದ್ದಾರೆ.

ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನೀರಿಕ್ಷೆ ಇದ್ದು ಮಂಥನ್ ಬಿ ರೆಸಾರ್ಟ್ ಬಳಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಂಡಿದೆ ಸತ್ಸಂಗದಲ್ಲೇ ಪಾಲ್ಗೊಳ್ಳುವ ಭಕ್ತರಿಗೆ ಆಯೋಜಕರ ವತಿಯಿಂದ ಬೆಲ್ಲ ಬಳಸಿಕೊಂಡು ಶೀರಾ ಅವಲಕ್ಕಿ ಮತ್ತು ಕಡಲೆ ಬಳಸಿಕೊಂಡು ವಿಶೇಷ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದ್ದು ಆಗಮಿಸುವ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು ಪ್ಲಾಸ್ಟಿಕ್ ರಹಿತವಾಗಿ ಸ್ಟೀಲ್ ಲೋಟ ಮತ್ತು ಪೇಪರ್ ಲೋಟದಲ್ಲಿ ವಿತರಿಸಲಾಗುತ್ತದೆ.

ಆನಂದ ಲಹರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತರ ಅನುಕೂಲಕ್ಕಾಗಿ ಮೂಳೂರು ಸಾಯಿರಾಧಾ ಹೆರಿಟೇಜ್ ಬಳಿ, ಕಾಪು ಓಶಿಯನ್ ಬೀಚ್ ರೆಸಾರ್ಟ್ ಬಳಿ, ಕಾಪು ಪಡು ಸರಕಾರಿ ಶಾಲೆ ಬಳಿ, ಮಂಥನ್ ಬೀಚ್ ರೆಸಾರ್ಟ್ ಬಳಿಯ ನಾಲ್ಕು ಕಡೆಗಳಲ್ಲಿ ಸೂಕ್ತ ರೀತಿಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮ ಸಂಯೋಜಕರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಸಹೋದರರಾದ ಹರೀಶ್ ಪಿ. ಶೆಟ್ಟಿ ಗುರ್ಮೆ, ಸತೀಶ್ ಪಿ. ಶೆಟ್ಟಿ ಗುರ್ಮೆ ನೇತೃತ್ವದಲ್ಲಿ ಎಲ್ಲಾ ಸಮಾಜ ಬಾಂಧವರು ಮತ್ತು ಆರ್ಟ್ ಆಫ್ ಲೀವಿಂಗ್ ಬಳಗದವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಗಳು ಪೂರ್ಣಗೊಂಡಿವೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago