ಉಡುಪಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಪು ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಭಾರತೀಯ ಜನಶಕ್ತಿ ಕಾಂಗ್ರೆಸ್ ನ ಮಹಾಕಾರ್ಯದರ್ಶಿ ಅನುಪಮಾ ಶೆಣೈ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ನನ್ನ ಸ್ವಕ್ಷೇತ್ರ. ಹಾಗಾಗಿ ಬಳ್ಳಾರಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.
ಫೆ. 18ರಂದು ತನ್ನ ಪಕ್ಷ ನೋಂದಣಿಯಾಗಿದ್ದು, ಬೆಂಡೆಕಾಯಿ ಚಿಹ್ನೆಯನ್ನು ಚುನಾವಣಾ ಆಯೋಗವು ನೀಡಿದೆ. ಪಕ್ಷದ ವತಿಯಿಂದ ರಾಜ್ಯದಲ್ಲಿ 80ರಷ್ಟು ಮಂದಿ ಸ್ಪರ್ಧಿಸಲು ಮುಂದೆ ಬಂದಿದ್ದಾರೆ. ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ. 30 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ. ಪಕ್ಷವೊಂದು ಬೇಕು ಎಂಬ ಉದ್ದೇಶದಿಂದ ಕಟ್ಟಿರುವುದೇ ವಿನಾ ಈ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಲ್ಲ ಎಂದು ಅನುಪಮಾ ಹೇಳಿದರು.
ಅಭ್ಯರ್ಥಿ ಅವಕಾಶ
ನಮ್ಮ ಪಕ್ಷ ಸೇರುವವರಿಗೆ ಕ್ರಿಮಿನಲ್ ಹಿನ್ನೆಲೆ ಇರಬಾರದು, ಕನ್ನಡ ಓದಲು, ಬರೆಯಲು ಬರಬೇಕು. ಪಕ್ಷದ ಸದಸ್ಯತ್ವಕ್ಕೆ 20 ರೂ. ವಿನಾ ಬೇರೇನನ್ನೂ ತೆಗೆದುಕೊಳ್ಳುವುದಿಲ್ಲ. ಹೋರಾಟದ ಮನೋಭಾವ ಇರುವವರು ಸ್ಪರ್ಧಿಸಲು ಇಚ್ಛಿಸಿದರೆ ಉಡುಪಿ ಕ್ಷೇತ್ರದಲ್ಲಿ ಅವಕಾಶ ನೀಡಲಾಗುವುದು ಎಂದರು.
ಡಿವೈಎಸ್ ಪಿ ಆಗಿದ್ದಾಗ ನಾನು ಅಪರಾಧಿಗಳ ಬೆಂಡೆತ್ತುತ್ತಿದ್ದೆ. ಈಗ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು, ಭ್ರಷ್ಟ ರಾಜಕಾರಣಿಗಳನ್ನು ಬೆಂಡೆತ್ತಬೇಕು. ಈ ಕಾರಣಕ್ಕಾಗಿ ಬೆಂಡೆಕಾಯಿ ಚಿಹ್ನೆ ಆಯ್ಕೆ ಮಾಡಲಾಗಿದೆ. ಬೆಂಡೆಕಾಯಿಗೆ ಮತನೀಡಿ ಎಂದು ಅನುಪಮಾ ಶೆಣೈ ಮನವಿ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…