ಕಾಪು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮದೇ ಆಡಳಿತದ ವಿರುದ್ಧ ತಾವೇ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಗರು ಸ್ವತಃ ನಗೆಪಾಟಲಿಗೀಡಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಟೀಕಿಸಿದರು.
ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಬಹುತೇಕ ಬಿಜೆಪಿಗರು ಗ್ಯಾರಂಟಿ ಯೋಜನೆಯ ಫಲಾನುಭವಿಗಳೇ ಆಗಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳು ಗ್ರಾಮ ಪಂಚಾಯತ್ಗಳ ಮುಂದೆ ಪ್ರತಿಭಟನೆ ಮಾಡುವುದರ ಬದಲಿಗೆ ಪ್ರತೀ ಗ್ರಾಮ ಪಂಚಾಯತ್ನಲ್ಲಿ ಬಿದ್ದಿರುವ ಮನೆ ನಿವೇಶನ, ಹಕ್ಕು ಪತ್ರ ಕುರಿತಾದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಿ ಎಂದರು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಜ್ ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…