ಕಾಪು: ರಿಕ್ಷಾ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

Featured, ಉಡುಪಿ

ಕಾಪು: ರಿಕ್ಷಾ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್‌ ಆರ್‌. (34) ಜ. 1ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಿವಾಹಿತ ದೀಪಕ್‌ ಆರ್‌. ಮದ್ಯ ಸೇವನೆ ಚಟವನ್ನು ಹೊಂದಿದ್ದು, ಜ. 1ರಂದು ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ರೂಂನಲ್ಲಿ ಮಲಗಿದ್ದರು. ಸಂಜೆ ತಾಯಿ ರೂಂಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್‌ ಮಾಡಲಾಗಿತ್ತು.
ಬಳಿಕ ನೆರೆಕರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್‌ ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ಬಟ್ಟೆ ತುಂಡನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Leave a Reply