Featured

ಕಾಪು : ರಿಕ್ಷಾ ನಿಲ್ದಾಣ ತೆರವುಗೊಳಿಸಲು ಹೈಕೋರ್ಟ್‌ ಆದೇಶ ;  ತೆರವಿಗೆ ಮುಂದಾದ ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಪ್ರತಿಭಟನೆ – vishwanews24

ಕಾಪು : ರಿಕ್ಷಾ ನಿಲ್ದಾಣ ತೆರವುಗೊಳಿಸಲು ಹೈಕೋರ್ಟ್‌ ಆದೇಶ ;  ತೆರವಿಗೆ ಮುಂದಾದ ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಪ್ರತಿಭಟನೆ

ಕಾಪು ಪೇಟೆಯ ಖಾಸಗಿ ಕಟ್ಟಡವೊಂದರ ಮುಂಭಾಗದಲ್ಲಿ ಇರುವ ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದ್ದು ಅದರಂತೆ ಪುರಸಭೆಯು ರಿಕ್ಷಾ ನಿಲ್ದಾಣ ತೆರವಿಕೆ ಮುಂದಾಗಿದ್ದು ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಕಾಪು ಪೇಟೆಯಲ್ಲಿ ಖಾಸಗಿ ಕುಟುಂಬಕ್ಕೆ ಸೇರಿದ ಜಾಗ ಮತ್ತು ಕಟ್ಟಡದ ಮುಂಭಾಗದಲ್ಲಿರುವ ರಿಕ್ಷಾ ನಿಲ್ದಾಣದಿಂದಾಗಿ ಅಂಗಡಿಯಲ್ಲಿರುವ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಖಾಸಗಿಯವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಪರವಾಗಿ ತೀರ್ಪು ನೀಡಿ ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಸೂಚನೆ ನೀಡಿತ್ತು.

ಇದನ್ನೂ ಓದಿ 👇

ಹೈಕೋರ್ಟ್ ನೀಡಿರುವ ಆದೇಶದಂತೆ ಕಾಪು ಪುರಸಭೆಯು ರಿಕ್ಷಾ ನಿಲ್ದಾಣ ತೆರವುಗೊಳಿಸುವ ವಿಚಾರದಲ್ಲಿ ಚರ್ಚಿಸಲು ಮತ್ತು ಆದೇಶ ಜಾರಿಯ ಕುರಿತಾಗಿ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಪ್ರತಿನಿಧಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಏಕಾಏಕಿಯಾಗಿ ಬಂದ ಹೈಕೋರ್ಟ್ ನ ಆದೇಶದಿಂದ ಗಲಿಬಿಲಿಗೊಂಡ ಕಾಪು ಪೇಟೆಯ ಎಲ್ಲಾ ರಿಕ್ಷಾ ಚಾಲಕರು ರಿಕ್ಷಾ ಸಮೇತವಾಗಿ ಪುರಸಭೆಗೆ ಆಗಮಿಸಿ, ಮುತ್ತಿಗೆ ಹಾಕಲು ಮುಂದಾದದರು.

ಇದರಿಂದಾಗಿ ಪುರಸಭೆ ಮುಂಭಾಗ ಕ್ಷಣಕಾಲ ಗೊಂದಲ ಉಂಟಾಯಿತು. ರಿಕ್ಷಾ ನಿಲ್ದಾಣ ತೆರವು ವಿಚಾರದಲ್ಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ರಿಕ್ಷಾ ನಿಲ್ದಾಣ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ತೆರವು ಮಾಡುವುದು ಪುರಸಭೆಗೆ ಅನಿವಾರ್ಯವೇ ಆದರೆ ಪರ್ಯಾಯ ಪ್ರದೇಶವನ್ನು ಗುರುತಿಸಿ, ನಿಲ್ದಾಣ ರಚಿಸಿ ಕೊಟ್ಟು ತೆರವು ನಡೆಸಲಿ. ಅಷ್ಟರವರೆಗೆ ಕಾಲಾವಕಾಶ ಮಾಡಿಕೊಡುವಂತೆ ರಿಕ್ಷಾ ಚಾಲಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ 👇

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago