Featured

ಕಾಪು : ರಿಕ್ಷಾ ನಿಲ್ದಾಣ ತೆರವುಗೊಳಿಸಲು ಹೈಕೋರ್ಟ್‌ ಆದೇಶ ;  ತೆರವಿಗೆ ಮುಂದಾದ ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಪ್ರತಿಭಟನೆ – vishwanews24

ಕಾಪು : ರಿಕ್ಷಾ ನಿಲ್ದಾಣ ತೆರವುಗೊಳಿಸಲು ಹೈಕೋರ್ಟ್‌ ಆದೇಶ ;  ತೆರವಿಗೆ ಮುಂದಾದ ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಪ್ರತಿಭಟನೆ

ಕಾಪು ಪೇಟೆಯ ಖಾಸಗಿ ಕಟ್ಟಡವೊಂದರ ಮುಂಭಾಗದಲ್ಲಿ ಇರುವ ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದ್ದು ಅದರಂತೆ ಪುರಸಭೆಯು ರಿಕ್ಷಾ ನಿಲ್ದಾಣ ತೆರವಿಕೆ ಮುಂದಾಗಿದ್ದು ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಕಾಪು ಪೇಟೆಯಲ್ಲಿ ಖಾಸಗಿ ಕುಟುಂಬಕ್ಕೆ ಸೇರಿದ ಜಾಗ ಮತ್ತು ಕಟ್ಟಡದ ಮುಂಭಾಗದಲ್ಲಿರುವ ರಿಕ್ಷಾ ನಿಲ್ದಾಣದಿಂದಾಗಿ ಅಂಗಡಿಯಲ್ಲಿರುವ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಖಾಸಗಿಯವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಪರವಾಗಿ ತೀರ್ಪು ನೀಡಿ ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಸೂಚನೆ ನೀಡಿತ್ತು.

ಇದನ್ನೂ ಓದಿ 👇

ಹೈಕೋರ್ಟ್ ನೀಡಿರುವ ಆದೇಶದಂತೆ ಕಾಪು ಪುರಸಭೆಯು ರಿಕ್ಷಾ ನಿಲ್ದಾಣ ತೆರವುಗೊಳಿಸುವ ವಿಚಾರದಲ್ಲಿ ಚರ್ಚಿಸಲು ಮತ್ತು ಆದೇಶ ಜಾರಿಯ ಕುರಿತಾಗಿ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಪ್ರತಿನಿಧಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಏಕಾಏಕಿಯಾಗಿ ಬಂದ ಹೈಕೋರ್ಟ್ ನ ಆದೇಶದಿಂದ ಗಲಿಬಿಲಿಗೊಂಡ ಕಾಪು ಪೇಟೆಯ ಎಲ್ಲಾ ರಿಕ್ಷಾ ಚಾಲಕರು ರಿಕ್ಷಾ ಸಮೇತವಾಗಿ ಪುರಸಭೆಗೆ ಆಗಮಿಸಿ, ಮುತ್ತಿಗೆ ಹಾಕಲು ಮುಂದಾದದರು.

ಇದರಿಂದಾಗಿ ಪುರಸಭೆ ಮುಂಭಾಗ ಕ್ಷಣಕಾಲ ಗೊಂದಲ ಉಂಟಾಯಿತು. ರಿಕ್ಷಾ ನಿಲ್ದಾಣ ತೆರವು ವಿಚಾರದಲ್ಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ರಿಕ್ಷಾ ನಿಲ್ದಾಣ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ತೆರವು ಮಾಡುವುದು ಪುರಸಭೆಗೆ ಅನಿವಾರ್ಯವೇ ಆದರೆ ಪರ್ಯಾಯ ಪ್ರದೇಶವನ್ನು ಗುರುತಿಸಿ, ನಿಲ್ದಾಣ ರಚಿಸಿ ಕೊಟ್ಟು ತೆರವು ನಡೆಸಲಿ. ಅಷ್ಟರವರೆಗೆ ಕಾಲಾವಕಾಶ ಮಾಡಿಕೊಡುವಂತೆ ರಿಕ್ಷಾ ಚಾಲಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ 👇

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago