Featured

ಕಾಪು: ಲೀಲಾಧರ್ ಶೆಟ್ಟಿ ಸಾಕು ಮಗಳು ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ – vishwanews24

ಕಾಪು: ಲೀಲಾಧರ್ ಶೆಟ್ಟಿ ಸಾಕು ಮಗಳು ನಾಪತ್ತೆ ಪ್ರಕರಣ – ಸ್ನೇಹಿತ ಸಹಿತ ನಾಲ್ವರ ಬಂಧನ

ಉಡುಪಿ: ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ.

Vishwanews24

ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯ ಮಲಗುವ ಕೋಣೆಯಲ್ಲಿನ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

Vishwanews24

ನಾಪತ್ತೆ ಪ್ರಕರಣವನ್ನು ಭೇದಿಸಲು ಪೋಲಿಸರು ತಂಡಗಳನ್ನು ರಚಿಸಿದ್ದು ಅದರಂತೆ ಸಾಕು ಮಗಳನ್ನು ಪತ್ತೆಹಚ್ಚುವುದರೊಂದಿಗೆ. ಹಾಗೂ ಆಕೆಯ ಗೆಳೆಯ ಗೀರೀಶ್ ಮತ್ತು ಆತನ ಇತರ ಮೂವರ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago