ಕಾಪು: ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಸ್ಮರಣಾರ್ಥ ಗುರುವಾರ ಕಾಪು ಶ್ರೀವೀರಭದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನೆರವೇರಿತು.
ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿ ಹಾಗೂ ಕಾಪು ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 110 ಯುನಿಟ್ ರಕ್ತ ಸಂಗ್ರಹಿಸಲಾಯಿತು. ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀಲಕ್ಷ್ಮೀ ಜನಾರ್ದನ ದೇಗುಲದ ಮೊಕ್ತಸರ ಮನೋಹರ ಎಸ್ ಶೆಟ್ಟಿ, ‘ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ’ ಎಂದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿ, ‘ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ರು-ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದು’ ಎಂದರು.
ಮಾಜಿ ಶಾಸಕ ಲಾಲಾಜಿ ಆರ್್ರ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಇದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…