Featured

ಕಾಪು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು – vishwanews24

ಕಾಪು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

ಕಾಪು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು.

ವಸಂತ್ 2024ರ ಎ.6ರಂದು ವಿಸಾದ ಬಗ್ಗೆ ತಿಳಿದುಕೊಳ್ಳಲು ಚಂಡಿಗಢಗೆ ಹೋಗಿದ್ದು, ಅಲ್ಲಿ ಜೋಬಿ, ವಿಜಯ್ ಸಿಂಗ್, ರಮನ್, ನಿರ್ವೈರ್ ಸಿಂಗ್ ಎಂಬವರನ್ನು ಪರಿಚಯಿಸಿದ್ದರು. ಬಳಿಕ ವಸಂತ್ ಪೂಜಾರಿ ಊರಿಗೆ ಬಂದು ಸೂರಜ್ ಹಾಗೂ ಮನೀಶ್ ಎಂಬವರನ್ನು ಅಜರಬೈಜಾನ್‌ಗೆ ಕಳುಹಿಸಿ ಕೊಡಲು ಕಂಪನಿಗೆ ತಿಳಿಸಿದ್ದು, ಕಂಪೆನಿಯವರು ಒಪ್ಪಿಕೊಂಡ ಮೇರೆಗೆ 2024ರ ಜುಲೈಯಲ್ಲಿ ಒಟ್ಟು 7,00,000ರೂ. ಹಣ ಪಾವತಿಸಿದ್ದರು.

ಬಳಿಕ ಕಂಪನಿಯವರು ಸೆ.22ರಂದು ಸೂರಜ್ ಮತ್ತು ಮನಿಶ್‌ಗೆ ಅಜರ ಬೈಜಾನ್‌ಗೆ ಕೆಲಸದ ಆಫರ್ ಮಾಡಿ ವಿಮಾನ ಟಿಕೆಟ್‌ನ್ನು ಮಾಡಿದ್ದು ಸ್ವಲ್ಪ ದಿನದ ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು. ಈ ಮಧ್ಯೆ 20 ಜನ ಪರಿಚಯದವರಿಗೂ ಕೆಲಸ ಕೊಡಿಸಲು ಒಟ್ಟು 56,91,824ರೂ. ಹಣವನ್ನು ಪಾವತಿಸಿದ್ದರು.

2025ರ ಜನವರಿ ಬಳಿಕ ಇವರೆಲ್ಲ ಹಲವು ಬಾರಿ ಚಂಡಿಗಡಕ್ಕೆ ಹೋಗಿ ಹಣ ವಾಪಾಸ್ಸು ನೀಡುವಂತೆ ಕೇಳಿದ್ದು, ಅದಕ್ಕೆ ಆರೋಪಿಗಳು 2025ರ ಜು.10 ಹಾಗೂ ಜು.30ಕ್ಕೆ ತಲಾ 6,00,000ರೂ. ಗಳ ಚೆಕ್‌ಗಳನ್ನು ನೀಡಿದ್ದು ಅವುಗಳನ್ನು ಬ್ಯಾಂಕಿನಲ್ಲಿ ಪರಿಶೀಲಿಸಿದಾಗ ಅವು ಕ್ಲೋಸ್ಡ್ ಅಕೌಂಟ್‌ನ ಚೆಕ್‌ಗಳು ಎಂಬುದು ತಿಳಿದುಬಂತು.

ಹೀಗೆ ಆರೋಪಿಗಳು 22 ಮಂದಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 63,91,824ರೂ. ಹಣವನ್ನು ಪಡೆದು ಕೊಂಡು ಕೆಲಸವನ್ನು ಕೋಡಿಸದೆ ಹಣವನ್ನು ವಾಪಾಸ್ಸು ನೀಡದೇ ಮೋಸ ಹಾಗೂ ವಂಚನೆ ಮಾಡಿರುವುದಾಗಿ ದೂರಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

10 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

11 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago