ಕಾಪು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು.
ವಸಂತ್ 2024ರ ಎ.6ರಂದು ವಿಸಾದ ಬಗ್ಗೆ ತಿಳಿದುಕೊಳ್ಳಲು ಚಂಡಿಗಢಗೆ ಹೋಗಿದ್ದು, ಅಲ್ಲಿ ಜೋಬಿ, ವಿಜಯ್ ಸಿಂಗ್, ರಮನ್, ನಿರ್ವೈರ್ ಸಿಂಗ್ ಎಂಬವರನ್ನು ಪರಿಚಯಿಸಿದ್ದರು. ಬಳಿಕ ವಸಂತ್ ಪೂಜಾರಿ ಊರಿಗೆ ಬಂದು ಸೂರಜ್ ಹಾಗೂ ಮನೀಶ್ ಎಂಬವರನ್ನು ಅಜರಬೈಜಾನ್ಗೆ ಕಳುಹಿಸಿ ಕೊಡಲು ಕಂಪನಿಗೆ ತಿಳಿಸಿದ್ದು, ಕಂಪೆನಿಯವರು ಒಪ್ಪಿಕೊಂಡ ಮೇರೆಗೆ 2024ರ ಜುಲೈಯಲ್ಲಿ ಒಟ್ಟು 7,00,000ರೂ. ಹಣ ಪಾವತಿಸಿದ್ದರು.
ಬಳಿಕ ಕಂಪನಿಯವರು ಸೆ.22ರಂದು ಸೂರಜ್ ಮತ್ತು ಮನಿಶ್ಗೆ ಅಜರ ಬೈಜಾನ್ಗೆ ಕೆಲಸದ ಆಫರ್ ಮಾಡಿ ವಿಮಾನ ಟಿಕೆಟ್ನ್ನು ಮಾಡಿದ್ದು ಸ್ವಲ್ಪ ದಿನದ ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು. ಈ ಮಧ್ಯೆ 20 ಜನ ಪರಿಚಯದವರಿಗೂ ಕೆಲಸ ಕೊಡಿಸಲು ಒಟ್ಟು 56,91,824ರೂ. ಹಣವನ್ನು ಪಾವತಿಸಿದ್ದರು.
2025ರ ಜನವರಿ ಬಳಿಕ ಇವರೆಲ್ಲ ಹಲವು ಬಾರಿ ಚಂಡಿಗಡಕ್ಕೆ ಹೋಗಿ ಹಣ ವಾಪಾಸ್ಸು ನೀಡುವಂತೆ ಕೇಳಿದ್ದು, ಅದಕ್ಕೆ ಆರೋಪಿಗಳು 2025ರ ಜು.10 ಹಾಗೂ ಜು.30ಕ್ಕೆ ತಲಾ 6,00,000ರೂ. ಗಳ ಚೆಕ್ಗಳನ್ನು ನೀಡಿದ್ದು ಅವುಗಳನ್ನು ಬ್ಯಾಂಕಿನಲ್ಲಿ ಪರಿಶೀಲಿಸಿದಾಗ ಅವು ಕ್ಲೋಸ್ಡ್ ಅಕೌಂಟ್ನ ಚೆಕ್ಗಳು ಎಂಬುದು ತಿಳಿದುಬಂತು.
ಹೀಗೆ ಆರೋಪಿಗಳು 22 ಮಂದಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 63,91,824ರೂ. ಹಣವನ್ನು ಪಡೆದು ಕೊಂಡು ಕೆಲಸವನ್ನು ಕೋಡಿಸದೆ ಹಣವನ್ನು ವಾಪಾಸ್ಸು ನೀಡದೇ ಮೋಸ ಹಾಗೂ ವಂಚನೆ ಮಾಡಿರುವುದಾಗಿ ದೂರಲಾಗಿದೆ.
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…