ಕಾಪು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು.
ವಸಂತ್ 2024ರ ಎ.6ರಂದು ವಿಸಾದ ಬಗ್ಗೆ ತಿಳಿದುಕೊಳ್ಳಲು ಚಂಡಿಗಢಗೆ ಹೋಗಿದ್ದು, ಅಲ್ಲಿ ಜೋಬಿ, ವಿಜಯ್ ಸಿಂಗ್, ರಮನ್, ನಿರ್ವೈರ್ ಸಿಂಗ್ ಎಂಬವರನ್ನು ಪರಿಚಯಿಸಿದ್ದರು. ಬಳಿಕ ವಸಂತ್ ಪೂಜಾರಿ ಊರಿಗೆ ಬಂದು ಸೂರಜ್ ಹಾಗೂ ಮನೀಶ್ ಎಂಬವರನ್ನು ಅಜರಬೈಜಾನ್ಗೆ ಕಳುಹಿಸಿ ಕೊಡಲು ಕಂಪನಿಗೆ ತಿಳಿಸಿದ್ದು, ಕಂಪೆನಿಯವರು ಒಪ್ಪಿಕೊಂಡ ಮೇರೆಗೆ 2024ರ ಜುಲೈಯಲ್ಲಿ ಒಟ್ಟು 7,00,000ರೂ. ಹಣ ಪಾವತಿಸಿದ್ದರು.
ಬಳಿಕ ಕಂಪನಿಯವರು ಸೆ.22ರಂದು ಸೂರಜ್ ಮತ್ತು ಮನಿಶ್ಗೆ ಅಜರ ಬೈಜಾನ್ಗೆ ಕೆಲಸದ ಆಫರ್ ಮಾಡಿ ವಿಮಾನ ಟಿಕೆಟ್ನ್ನು ಮಾಡಿದ್ದು ಸ್ವಲ್ಪ ದಿನದ ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು. ಈ ಮಧ್ಯೆ 20 ಜನ ಪರಿಚಯದವರಿಗೂ ಕೆಲಸ ಕೊಡಿಸಲು ಒಟ್ಟು 56,91,824ರೂ. ಹಣವನ್ನು ಪಾವತಿಸಿದ್ದರು.
2025ರ ಜನವರಿ ಬಳಿಕ ಇವರೆಲ್ಲ ಹಲವು ಬಾರಿ ಚಂಡಿಗಡಕ್ಕೆ ಹೋಗಿ ಹಣ ವಾಪಾಸ್ಸು ನೀಡುವಂತೆ ಕೇಳಿದ್ದು, ಅದಕ್ಕೆ ಆರೋಪಿಗಳು 2025ರ ಜು.10 ಹಾಗೂ ಜು.30ಕ್ಕೆ ತಲಾ 6,00,000ರೂ. ಗಳ ಚೆಕ್ಗಳನ್ನು ನೀಡಿದ್ದು ಅವುಗಳನ್ನು ಬ್ಯಾಂಕಿನಲ್ಲಿ ಪರಿಶೀಲಿಸಿದಾಗ ಅವು ಕ್ಲೋಸ್ಡ್ ಅಕೌಂಟ್ನ ಚೆಕ್ಗಳು ಎಂಬುದು ತಿಳಿದುಬಂತು.
ಹೀಗೆ ಆರೋಪಿಗಳು 22 ಮಂದಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 63,91,824ರೂ. ಹಣವನ್ನು ಪಡೆದು ಕೊಂಡು ಕೆಲಸವನ್ನು ಕೋಡಿಸದೆ ಹಣವನ್ನು ವಾಪಾಸ್ಸು ನೀಡದೇ ಮೋಸ ಹಾಗೂ ವಂಚನೆ ಮಾಡಿರುವುದಾಗಿ ದೂರಲಾಗಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…