ಉಡುಪಿ

ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ– ಕಾಂಗ್ರೆಸ್ ಜಿದ್ದಾಜಿದ್ದಿನ ಹಣಾಹಣಿ,,,… ವಸಂತ ಸಾಲಿಯಾನ್‌ 5 ಬಾರಿ ಗೆದ್ದ ಕ್ಷೇತ್ರ

ಕಾಪು ತನ್ನದೇ ಆದ ವಿಶಿಷ್ಟತೆ ಹೊಂದಿರುವ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದೆ. ವಸಂತ ಸಾಲಿಯಾನ್ ಹಾಗೂ ಭಾಸ್ಕರ ಶೆಟ್ಟಿ ಅವರಂತಹ ಹಿರಿಯ ರಾಜಕಾರಣಿಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ ಕ್ಷೇತ್ರ ಎಂಬ ಹೆಗ್ಗಳಿಕೆ ಈ ಕ್ಷೇತ್ರದ್ದು. ಕಾಂಗ್ರೆಸ್‌ನ ಹಿರಿಯ ನಾಯಕ ವಿನಯ ಕುಮಾರ್ ಸೊರಕೆ ಹಾಲಿ ಶಾಸಕರಾಗಿದ್ದಾರೆ

ಆರಂಭದಲ್ಲಿ ಈ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇತ್ತು. 1983 ಮತ್ತು ಆ ನಂತರದ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆಯೇ ತುರುಸಿನ ಸ್ಪರ್ಧೆ ಏರ್ಪಟ್ಟಿರುವುದನ್ನು ಗಮನಿಸಬಹುದು.

ಭಾಸ್ಕರ್ ಶೆಟ್ಟಿ ಅವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಎರಡು ಬಾರಿ ಪಿಎಸ್‌ಪಿ ಅಭ್ಯರ್ಥಿಯಾಗಿ ಜಯ ಗಳಿಸಿದರೆ, ಇನ್ನೆರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಭೇರಿ ಬಾರಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಆಯ್ಕೆಯಾದ ವಸಂತ ಸಾಲಿಯಾನ್ ಅವರನ್ನು ಆ ಕ್ಷೇತ್ರದ ಜನತೆ ಸತತ ಐದು ಬಾರಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರ ಎದುರು ಪರಾಜಯಗೊಂಡ ವಸಂತ್ ಸಾಲಿಯಾನ್ ಅವರು ಆ ನಂತರ ಗೆದ್ದಿಲ್ಲ. ಲಾಲಾಜಿ ಅವರು ಸತತ ಎರಡು ಬಾರಿ ಜಯ ಗಳಿಸಿ ಮೂರನೇ ಬಾರಿಗೆ ಸೋತಿದ್ದಾರೆ. ಈಗ ಅವರು ಮತ್ತೊಮ್ಮೆ ಸ್ಪರ್ಧಿಸುವ ಉಮೇದಿನಲ್ಲಿ ಇದ್ದಾರೆ.

ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಸೋತಿರುವ ಹಲವು ಉದಾಹರಣೆಗಳನ್ನು ಕಾಣಬಹುದು. 1962ರಲ್ಲಿ ಕಾಂಗ್ರೆಸ್‌ನ ಪಿಂಟೊ ಅವರು ಪಿಎಸ್‌ಪಿಯ ಭಾಸ್ಕರ ಶೆಟ್ಟಿ ಅವರ ವಿರುದ್ಧ ಕೇವಲ 183 ಮತಗಳ ಅಂತರದಿಂದ ಸೋತಿದ್ದರು. 2008ರಲ್ಲಿ ಲಾಲಾಜಿ ಮೆಂಡನ್ ಅವರು ವಸಂತ ಸಾಲಿಯಾನ ಅವರನ್ನು 967 ಮತಗಳ ಅಂತರದಿಂದ ಮಣಿಸಿದ್ದರು. ಇದೇ ಲಾಲಾಜಿ ಅವರು 2004ರಲ್ಲಿ ಸಾಲಿಯಾನ್ ವಿರುದ್ಧ ಕೇವಲ 1,390 ಮತಗಳ ಅಂತರದಿಂದ ಗೆದ್ದಿದ್ದರು. ಹಾಲಿ ಶಾಸಕ ವಿನಯ ಕುಮರ್ ಸೊರಕೆ ಅವರು ಕಳೆದ ಚುನಾವಣೆಯಲ್ಲಿ 1,885 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದನ್ನು ಸಹ ಸ್ಮರಿಸಬಹುದು.

ಈಗಂತೂ ಈ ಕ್ಷೇತ್ರ ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ. ಜೆಡಿಎಸ್‌ ಇದ್ದರೂ ಗಮನ ಸೆಳೆಯುವಂತೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿತ್ತು. ಬಿಜೆಪಿ ವಿರುದ್ಧ ದೊಡ್ಡ ಮಟ್ಟದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಅವರು ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದರು. ಕ್ರಿಶ್ಚಿಯನ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಿದು.

 

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

57 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago