ಉಡುಪಿ

ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ– ಕಾಂಗ್ರೆಸ್ ಜಿದ್ದಾಜಿದ್ದಿನ ಹಣಾಹಣಿ,,,… ವಸಂತ ಸಾಲಿಯಾನ್‌ 5 ಬಾರಿ ಗೆದ್ದ ಕ್ಷೇತ್ರ

ಕಾಪು ತನ್ನದೇ ಆದ ವಿಶಿಷ್ಟತೆ ಹೊಂದಿರುವ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದೆ. ವಸಂತ ಸಾಲಿಯಾನ್ ಹಾಗೂ ಭಾಸ್ಕರ ಶೆಟ್ಟಿ ಅವರಂತಹ ಹಿರಿಯ ರಾಜಕಾರಣಿಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ ಕ್ಷೇತ್ರ ಎಂಬ ಹೆಗ್ಗಳಿಕೆ ಈ ಕ್ಷೇತ್ರದ್ದು. ಕಾಂಗ್ರೆಸ್‌ನ ಹಿರಿಯ ನಾಯಕ ವಿನಯ ಕುಮಾರ್ ಸೊರಕೆ ಹಾಲಿ ಶಾಸಕರಾಗಿದ್ದಾರೆ

ಆರಂಭದಲ್ಲಿ ಈ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇತ್ತು. 1983 ಮತ್ತು ಆ ನಂತರದ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆಯೇ ತುರುಸಿನ ಸ್ಪರ್ಧೆ ಏರ್ಪಟ್ಟಿರುವುದನ್ನು ಗಮನಿಸಬಹುದು.

ಭಾಸ್ಕರ್ ಶೆಟ್ಟಿ ಅವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಎರಡು ಬಾರಿ ಪಿಎಸ್‌ಪಿ ಅಭ್ಯರ್ಥಿಯಾಗಿ ಜಯ ಗಳಿಸಿದರೆ, ಇನ್ನೆರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಭೇರಿ ಬಾರಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಆಯ್ಕೆಯಾದ ವಸಂತ ಸಾಲಿಯಾನ್ ಅವರನ್ನು ಆ ಕ್ಷೇತ್ರದ ಜನತೆ ಸತತ ಐದು ಬಾರಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರ ಎದುರು ಪರಾಜಯಗೊಂಡ ವಸಂತ್ ಸಾಲಿಯಾನ್ ಅವರು ಆ ನಂತರ ಗೆದ್ದಿಲ್ಲ. ಲಾಲಾಜಿ ಅವರು ಸತತ ಎರಡು ಬಾರಿ ಜಯ ಗಳಿಸಿ ಮೂರನೇ ಬಾರಿಗೆ ಸೋತಿದ್ದಾರೆ. ಈಗ ಅವರು ಮತ್ತೊಮ್ಮೆ ಸ್ಪರ್ಧಿಸುವ ಉಮೇದಿನಲ್ಲಿ ಇದ್ದಾರೆ.

ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಸೋತಿರುವ ಹಲವು ಉದಾಹರಣೆಗಳನ್ನು ಕಾಣಬಹುದು. 1962ರಲ್ಲಿ ಕಾಂಗ್ರೆಸ್‌ನ ಪಿಂಟೊ ಅವರು ಪಿಎಸ್‌ಪಿಯ ಭಾಸ್ಕರ ಶೆಟ್ಟಿ ಅವರ ವಿರುದ್ಧ ಕೇವಲ 183 ಮತಗಳ ಅಂತರದಿಂದ ಸೋತಿದ್ದರು. 2008ರಲ್ಲಿ ಲಾಲಾಜಿ ಮೆಂಡನ್ ಅವರು ವಸಂತ ಸಾಲಿಯಾನ ಅವರನ್ನು 967 ಮತಗಳ ಅಂತರದಿಂದ ಮಣಿಸಿದ್ದರು. ಇದೇ ಲಾಲಾಜಿ ಅವರು 2004ರಲ್ಲಿ ಸಾಲಿಯಾನ್ ವಿರುದ್ಧ ಕೇವಲ 1,390 ಮತಗಳ ಅಂತರದಿಂದ ಗೆದ್ದಿದ್ದರು. ಹಾಲಿ ಶಾಸಕ ವಿನಯ ಕುಮರ್ ಸೊರಕೆ ಅವರು ಕಳೆದ ಚುನಾವಣೆಯಲ್ಲಿ 1,885 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದನ್ನು ಸಹ ಸ್ಮರಿಸಬಹುದು.

ಈಗಂತೂ ಈ ಕ್ಷೇತ್ರ ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ. ಜೆಡಿಎಸ್‌ ಇದ್ದರೂ ಗಮನ ಸೆಳೆಯುವಂತೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿತ್ತು. ಬಿಜೆಪಿ ವಿರುದ್ಧ ದೊಡ್ಡ ಮಟ್ಟದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಅವರು ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದರು. ಕ್ರಿಶ್ಚಿಯನ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಿದು.

 

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

3 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

12 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

28 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

45 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

54 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago