ಆರಂಭದಲ್ಲಿ ಈ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇತ್ತು. 1983 ಮತ್ತು ಆ ನಂತರದ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆಯೇ ತುರುಸಿನ ಸ್ಪರ್ಧೆ ಏರ್ಪಟ್ಟಿರುವುದನ್ನು ಗಮನಿಸಬಹುದು.
ಭಾಸ್ಕರ್ ಶೆಟ್ಟಿ ಅವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಎರಡು ಬಾರಿ ಪಿಎಸ್ಪಿ ಅಭ್ಯರ್ಥಿಯಾಗಿ ಜಯ ಗಳಿಸಿದರೆ, ಇನ್ನೆರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಭೇರಿ ಬಾರಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ನಿಂದ ಆಯ್ಕೆಯಾದ ವಸಂತ ಸಾಲಿಯಾನ್ ಅವರನ್ನು ಆ ಕ್ಷೇತ್ರದ ಜನತೆ ಸತತ ಐದು ಬಾರಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರ ಎದುರು ಪರಾಜಯಗೊಂಡ ವಸಂತ್ ಸಾಲಿಯಾನ್ ಅವರು ಆ ನಂತರ ಗೆದ್ದಿಲ್ಲ. ಲಾಲಾಜಿ ಅವರು ಸತತ ಎರಡು ಬಾರಿ ಜಯ ಗಳಿಸಿ ಮೂರನೇ ಬಾರಿಗೆ ಸೋತಿದ್ದಾರೆ. ಈಗ ಅವರು ಮತ್ತೊಮ್ಮೆ ಸ್ಪರ್ಧಿಸುವ ಉಮೇದಿನಲ್ಲಿ ಇದ್ದಾರೆ.
ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಸೋತಿರುವ ಹಲವು ಉದಾಹರಣೆಗಳನ್ನು ಕಾಣಬಹುದು. 1962ರಲ್ಲಿ ಕಾಂಗ್ರೆಸ್ನ ಪಿಂಟೊ ಅವರು ಪಿಎಸ್ಪಿಯ ಭಾಸ್ಕರ ಶೆಟ್ಟಿ ಅವರ ವಿರುದ್ಧ ಕೇವಲ 183 ಮತಗಳ ಅಂತರದಿಂದ ಸೋತಿದ್ದರು. 2008ರಲ್ಲಿ ಲಾಲಾಜಿ ಮೆಂಡನ್ ಅವರು ವಸಂತ ಸಾಲಿಯಾನ ಅವರನ್ನು 967 ಮತಗಳ ಅಂತರದಿಂದ ಮಣಿಸಿದ್ದರು. ಇದೇ ಲಾಲಾಜಿ ಅವರು 2004ರಲ್ಲಿ ಸಾಲಿಯಾನ್ ವಿರುದ್ಧ ಕೇವಲ 1,390 ಮತಗಳ ಅಂತರದಿಂದ ಗೆದ್ದಿದ್ದರು. ಹಾಲಿ ಶಾಸಕ ವಿನಯ ಕುಮರ್ ಸೊರಕೆ ಅವರು ಕಳೆದ ಚುನಾವಣೆಯಲ್ಲಿ 1,885 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದನ್ನು ಸಹ ಸ್ಮರಿಸಬಹುದು.
ಈಗಂತೂ ಈ ಕ್ಷೇತ್ರ ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ. ಜೆಡಿಎಸ್ ಇದ್ದರೂ ಗಮನ ಸೆಳೆಯುವಂತೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿತ್ತು. ಬಿಜೆಪಿ ವಿರುದ್ಧ ದೊಡ್ಡ ಮಟ್ಟದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಅವರು ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದರು. ಕ್ರಿಶ್ಚಿಯನ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಿದು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…