ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಆಯೋಜನೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ ಸೆ.30 ರ ಮಂಗಳವಾರ ಸಂಜೆ 4 ಗಂಟೆಗೆ “ಕಾಪು ಪಿಲಿ ಪರ್ಬ ಸೀಸನ್-3” ಕಾರ್ಯಕ್ರಮವು ಕಾಪು ಹೊಸ ಮಾರಿಗುಡಿ ದೇವಸ್ಥಾನ ಆವರಣದಲ್ಲಿ ಜರಗಲಿದೆ ಎಂದು ರಕ್ಷಣಾಪುರ ಜವನೆರ್ ಕಾಪು ಇದರ ಅಧ್ಯಕ್ಷ ನವೀನ್ ಎನ್ ಶೆಟ್ಟಿ ಹೇಳಿದರು.
ಅವರು ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ವಧರ್ಮದ ಗುರುಗಳ ಉಪಸ್ಥಿತಿಯಲ್ಲಿ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ.
ಉಭಯ ಜಿಲ್ಲೆಗಳ ಮುಖಂಡರುಗಳು, ರಾಜ್ಯಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರತಿಷ್ಠಿತ ವಯೋಲಿನ್, ಚಂಡೆ ವಾದನ ಮತ್ತು ವಿವಿಧ ನೃತ್ಯ ಕಾರ್ಯಕ್ರಮ ನಡೆಯಲಿದೆ.
ವಿವಿಧ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ 9 ಜನ ಪ್ರಮುಖರನ್ನು ವೇದಿಕೆಯಲ್ಲಿ ಸನ್ಮಾನಿಸಲಾಗುವುದು.
ಸ್ಪರ್ಧಾ ಕಾರ್ಯಕ್ರಮದಲ್ಲಿ ಪ್ರಮುಖ 10 ತಂಡಗಳು ಭಾಗವಹಿಸುತ್ತಿದ್ದು, ಕರಾವಳಿಯ ಸಾಂಸ್ಕೃತಿಕ ಕಾರ್ಯಕ್ರಮದ ಹುಲಿವೇಷದಾರಿಗಳ ಅಬ್ಬರ ನಡೆಯಲಿದೆ.
ವಿಜೇತ ತಂಡಗಳಿಗೆ ಪ್ರಥಮ ರೂ.1 ಲಕ್ಷ 50 ಸಾವಿರ, ದ್ವಿತೀಯ ರೂ.1 ಲಕ್ಷ, ತೃತೀಯ ರೂ. 50 ಸಾವಿರ ನಗದು ಬಹುಮಾನ ನೀಡಲಾಗುವುದು.
ಅಲ್ಲದೆ ವಿಶೇಷ ಕರಿಹುಲಿ, ಅಕ್ಕಿ ಮುಡಿ ಹಾರಿಸುವುದಕ್ಕೆ, ಅತ್ಯುತ್ತಮ ಹುಲಿ ಕುಣಿತಗಾರ, ವಿಶೇಷ ಮರಿಹುಲಿ, ಅತ್ಯುತ್ತಮ ತಾಸೆ, ವಿಶೇಷ ನಗದು ಬಹುಮಾನ ನೀಡಲಾಗುವುದು ಎಂದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಪು ಪಿಲಿ ಪರ್ಬವು ಉಡುಪಿ ಜಿಲ್ಲೆಯಲ್ಲಿ ನಡೆಯುವ ಸ್ಪರ್ಧಾತ್ಮಕ ಕಾರ್ಯಕ್ರಮ. ಸಂಸ್ಕತಿ ಉಳಿವಿನ ಜೊತೆಗೆ ಯುವ ಜನರಿಗೆ ಕಲೆಯಲ್ಲಿ ಆಸಕ್ತಿ ವಹಿಸಲು ಪೂರಕವಾಗಿದೆ. ಸರ್ವ ಜನರೂ ಭಾಗವಹಿಸುವ ಜೊತೆಗೆ ಕಾಪುವಿನ ಪ್ರತಿಷ್ಠಿತ ಕಾರ್ಯಕ್ರಮವಾಗಿ ರೂಪಿಸುವುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಯಾಝ್ ಅಹಮ್ಮದ್, ಮಹಿಳಾ ಘಟಕಾಧ್ಯಕ್ಷೆ ಶಾಂತಲತಾ ಶೆಟ್ಟಿ, ಅಲ್ಪ ಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶರ್ಫುದ್ದೀನ್ ಶೇಖ್,ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಾಪು ದಿವಾಕರ ಶೆಟ್ಟಿ, ಗಣೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…