ಉಡುಪಿ

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ಸೌತ್ ಕೆನರಾ ಪೋಟೊ ಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ನಡೆಯಿತು. ಈ ಸಂದರ್ಭ ಛಾಯಾಗ್ರಹಕರ ಕುಟುಂಬದ ಕೊರೊನಾ ವಾರಿಯರ್ಸ್ ಗೆ ಅವರ ಮನೆಗಳಲ್ಲಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಪು ವಲಯದ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಅವರ ಪತ್ನಿ, ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಬಾಲಕೃಷ್ಣ ಅವರನ್ನು ಅವರ ಉಚ್ಚಿಲದ ‘ಶ್ರೀ ಭಾಗ್ಯ’ ಮನೆಯಲ್ಲಿ ಸನ್ಮಾನಿಸಿದರೆ, ಬೆಳ್ಮಣ್ಣಿನ ಛಾಯಾಗ್ರಾಹಕ ವಿಲ್ಫ್ರೆಡ್ ಕ್ಯಾಸ್ತಲಿನೋ ಅವರ ಪತ್ನಿ ಜೇನ್ ಮೇವಿ ವೇಗಸ್ ಅವರನ್ನು ಬೆಳ್ಮಣ್ಣಿನ ಅವರ ಸ್ವಗೃಹದಲ್ಲಿ ಎಸ್‍ಕೆಪಿಎ ಕಾಪು ವಲಯದ ಅಧ್ಯಕ್ಷ ವೀರೇಂದ್ರ ಪೂಜಾರಿ ಮತ್ತು ಅವರ ತಂಡ ಸನ್ಮಾನಿಸಿದರು.

ಆಶಾ ಕಾರ್ಯಕರ್ತೆ ಗೀತಾ ಬಾಲಕೃಷ್ಣ ಪೂಜಾರಿ ಮಾತನಾಡಿ, ಕೋವಿಡ್ 19ನಿಂದ ಆಶಾ ಕಾರ್ಯಕರ್ತೆಯರನ್ನು ಸಮಾಜ ಗುರುತಿಸುವಂತಾಗಿದೆ. ಈಗ ಯಾರ ಮನೆಗೆ ಹೋದರೂ, ಅವರು ಆದರದಿಂದ ಬರಮಾಡಿ ಕೊಳ್ಳುತ್ತಾರೆ. ಅಂತೆಯೇ ಅತ್ಯಂತ ಪ್ರೀತಿಯಿಂದ ಮಾತನಾಡುತ್ತಾರೆ. ಕಾಪು ವಲಯ ಎಸ್‍ಕೆಪಿಎ ಸಂಸ್ಥೆ ನಮಗೆ ಅನ್ನ ನೀಡುವ ಸಂಸ್ಥೆ. ಬೇರೆ ಯಾವುದೇ ಸಂಸ್ಥೆ ಸನ್ಮಾನಿಸಿದಾಗ ಕೊಡದ ಖುಷಿ, ಈಗ ಸಿಕ್ಕಿದೆ ಎಂದರು.

ಬಾಲಕೃಷ್ಣ ಪೂಜಾರಿ ಮಾತನಾಡಿ, ಕಾಪು ಎಸ್‍ಕೆಪಿಎ ಸಂಸ್ಥೆ ಮಾಡಿದ ಸನ್ಮಾನ ಅತೀವ ಸಂತಸ ತಂದಿದೆ. ನಾವು ನಿರೀಕ್ಷಿಸದೆ ಇದ್ದ ಸನ್ಮಾನ ನಮ್ಮ ಮನೆ ಬಾಗಿಲಿಗೆ ಬಂದಿದೆ ಎಂದರು.

ಈ ಸಂದರ್ಭ ಕಾಪು ವಲಯ ಎಸ್‍ಕೆಪಿಎ ಅಧ್ಯಕ್ಷ ವೀರೇಂದ್ರ ಪೂಜಾರಿ, ಕಾರ್ಯದರ್ಶಿ ಸಚಿನ್ ಉಚ್ಚಿಲ, ಕೋಶಾಧಿಕಾರಿ ಸುಜಿತ್ ಕಲ್ಲುಗುಡ್ಡೆ,ಪ್ರಮೋದ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago