ಉಡುಪಿ

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ಸೌತ್ ಕೆನರಾ ಪೋಟೊ ಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ನಡೆಯಿತು. ಈ ಸಂದರ್ಭ ಛಾಯಾಗ್ರಹಕರ ಕುಟುಂಬದ ಕೊರೊನಾ ವಾರಿಯರ್ಸ್ ಗೆ ಅವರ ಮನೆಗಳಲ್ಲಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಪು ವಲಯದ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಅವರ ಪತ್ನಿ, ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಬಾಲಕೃಷ್ಣ ಅವರನ್ನು ಅವರ ಉಚ್ಚಿಲದ ‘ಶ್ರೀ ಭಾಗ್ಯ’ ಮನೆಯಲ್ಲಿ ಸನ್ಮಾನಿಸಿದರೆ, ಬೆಳ್ಮಣ್ಣಿನ ಛಾಯಾಗ್ರಾಹಕ ವಿಲ್ಫ್ರೆಡ್ ಕ್ಯಾಸ್ತಲಿನೋ ಅವರ ಪತ್ನಿ ಜೇನ್ ಮೇವಿ ವೇಗಸ್ ಅವರನ್ನು ಬೆಳ್ಮಣ್ಣಿನ ಅವರ ಸ್ವಗೃಹದಲ್ಲಿ ಎಸ್‍ಕೆಪಿಎ ಕಾಪು ವಲಯದ ಅಧ್ಯಕ್ಷ ವೀರೇಂದ್ರ ಪೂಜಾರಿ ಮತ್ತು ಅವರ ತಂಡ ಸನ್ಮಾನಿಸಿದರು.

ಆಶಾ ಕಾರ್ಯಕರ್ತೆ ಗೀತಾ ಬಾಲಕೃಷ್ಣ ಪೂಜಾರಿ ಮಾತನಾಡಿ, ಕೋವಿಡ್ 19ನಿಂದ ಆಶಾ ಕಾರ್ಯಕರ್ತೆಯರನ್ನು ಸಮಾಜ ಗುರುತಿಸುವಂತಾಗಿದೆ. ಈಗ ಯಾರ ಮನೆಗೆ ಹೋದರೂ, ಅವರು ಆದರದಿಂದ ಬರಮಾಡಿ ಕೊಳ್ಳುತ್ತಾರೆ. ಅಂತೆಯೇ ಅತ್ಯಂತ ಪ್ರೀತಿಯಿಂದ ಮಾತನಾಡುತ್ತಾರೆ. ಕಾಪು ವಲಯ ಎಸ್‍ಕೆಪಿಎ ಸಂಸ್ಥೆ ನಮಗೆ ಅನ್ನ ನೀಡುವ ಸಂಸ್ಥೆ. ಬೇರೆ ಯಾವುದೇ ಸಂಸ್ಥೆ ಸನ್ಮಾನಿಸಿದಾಗ ಕೊಡದ ಖುಷಿ, ಈಗ ಸಿಕ್ಕಿದೆ ಎಂದರು.

ಬಾಲಕೃಷ್ಣ ಪೂಜಾರಿ ಮಾತನಾಡಿ, ಕಾಪು ಎಸ್‍ಕೆಪಿಎ ಸಂಸ್ಥೆ ಮಾಡಿದ ಸನ್ಮಾನ ಅತೀವ ಸಂತಸ ತಂದಿದೆ. ನಾವು ನಿರೀಕ್ಷಿಸದೆ ಇದ್ದ ಸನ್ಮಾನ ನಮ್ಮ ಮನೆ ಬಾಗಿಲಿಗೆ ಬಂದಿದೆ ಎಂದರು.

ಈ ಸಂದರ್ಭ ಕಾಪು ವಲಯ ಎಸ್‍ಕೆಪಿಎ ಅಧ್ಯಕ್ಷ ವೀರೇಂದ್ರ ಪೂಜಾರಿ, ಕಾರ್ಯದರ್ಶಿ ಸಚಿನ್ ಉಚ್ಚಿಲ, ಕೋಶಾಧಿಕಾರಿ ಸುಜಿತ್ ಕಲ್ಲುಗುಡ್ಡೆ,ಪ್ರಮೋದ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago