Featured

ಕಾಪು : ವಿಷ ಹಾಕಿ ಸಾಕುನಾಯಿ ಕೊಂದ ಆರೋಪ ; ತನಿಖೆಗಾಗಿ ಹೂತಿದ್ದ ನಾಯಿ ದೇಹ ಹೊರತೆಗೆದು ಪೋಸ್ಟ್ ಮಾರ್ಟಂ – vishwanews24

ಕಾಪು : ವಿಷ ಹಾಕಿ ಸಾಕುನಾಯಿ ಕೊಂದ ಆರೋಪ ; ತನಿಖೆಗಾಗಿ ಹೂತಿದ್ದ ನಾಯಿ ದೇಹ ಹೊರತೆಗೆದು ಪೋಸ್ಟ್ ಮಾರ್ಟಂ

ಶಿರ್ವ : ಪ್ರೀತಿಯಿಂದ ಸಾಕಿದ್ದ ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದ ಹಿನ್ನಲೆ ಸಾಕುನಾಯಿಗೆ ಪಕ್ಕದ ಮನೆಯವರು ಆಹಾರದಲ್ಲಿ ವಿಷ ಬೆರೆಸಿ ಕೊಂದಿದ್ದಾರೆ ಎಂದು ಆರೋಪಿಸಿ ಶ್ವಾನದ ಮಾಲೀಕರು ದೂರು ನೀಡಿರುವ ಹಿನ್ನೆಲೆಯಲ್ಲಿ, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಪೊಲೀಸರು ಮೇಲಕ್ಕೆತ್ತಿದ್ದಾರೆ. ಜಿಲ್ಲೆಯ ಕಾಪು ಮಣಿಪುರದ ಬಡಗು ಮನೆ ಬಳಿ ಈ ಬೆಳವಣಿಗೆ ನಡೆಯಿತು.

ಸಾಮಾಜಿಕ ಕಾರ್ಯಕರ್ತೆ, ಪ್ರಾಣಿಪ್ರಿಯೆ ಬಿಂದು ಎಂಬವರು ನಾಯಿಯನ್ನು ಸಾಕಿದ್ದರು. ಫೆಬ್ರವರಿ 21ರಂದು ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದೆ. ಈ ಹಿನ್ನಲೆ ಸಾಕು ನಾಯಿಯನ್ನು ಮನೆಯವರು ಅಂತ್ಯಕ್ರಿಯೆ ನಡೆಸಿದ್ದರು. ನಾಯಿಗೆ ವಿಷ ಬೆರೆಸಿ ಕೊಂದಿರುವ ಶಂಕೆ ಹಿನ್ನೆಲೆಯಲ್ಲಿ ಫೆಬ್ರವರಿ 21ರಂದೇ ಬಿಂದು ಅವರು ಕಾಪು ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಹೊರತೆಗೆದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಯಿಯ ಕಳೇಬರ ಹೊರತೆಗೆಸಿ ಪೋಸ್ಟ್ ಮಾರ್ಟಂ ಮಾಡಿಸಿದ್ದಾರೆ.

ದೂರು ದಾಖಲಾದ ಕಾರಣ ಕಾನೂನು ಪ್ರಕ್ರಿಯೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸಬೇಕಾಯಿತು. ಹೆಡ್ ಕಾನ್‌ಸ್ಟೇಬಲ್‌ಗಳಾದ ಅರುಣ್ ಉಪ್ಪರು, ಸುಧಾಕರ್ ನಾಯ್ಸ್, ಪ್ರಾಣಿ ದಯಾ ಸಂಘದ ಮಂಜುಳಾ ಸಮಕ್ಷಮದಲ್ಲಿ ನಾಯಿಯ ಕಳೇಬರವನ್ನು ಗುಂಡಿಯಿಂದ ಮೇಲಕ್ಕೆತ್ತಲಾಯಿತು. ಪಶುವೈದ್ಯ ಡಾ.ಚಂದ್ರಕಾಂತ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ್ದು ವರದಿ ಬರಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

https://fb.watch/xZ8_hx2WYN/

Vishwa News 24

Recent Posts

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

3 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

15 minutes ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

27 minutes ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

38 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

44 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

3 hours ago