Featured

ಕಾಪು : ವಿಷ ಹಾಕಿ ಸಾಕುನಾಯಿ ಕೊಂದ ಆರೋಪ ; ತನಿಖೆಗಾಗಿ ಹೂತಿದ್ದ ನಾಯಿ ದೇಹ ಹೊರತೆಗೆದು ಪೋಸ್ಟ್ ಮಾರ್ಟಂ – vishwanews24

ಕಾಪು : ವಿಷ ಹಾಕಿ ಸಾಕುನಾಯಿ ಕೊಂದ ಆರೋಪ ; ತನಿಖೆಗಾಗಿ ಹೂತಿದ್ದ ನಾಯಿ ದೇಹ ಹೊರತೆಗೆದು ಪೋಸ್ಟ್ ಮಾರ್ಟಂ

ಶಿರ್ವ : ಪ್ರೀತಿಯಿಂದ ಸಾಕಿದ್ದ ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದ ಹಿನ್ನಲೆ ಸಾಕುನಾಯಿಗೆ ಪಕ್ಕದ ಮನೆಯವರು ಆಹಾರದಲ್ಲಿ ವಿಷ ಬೆರೆಸಿ ಕೊಂದಿದ್ದಾರೆ ಎಂದು ಆರೋಪಿಸಿ ಶ್ವಾನದ ಮಾಲೀಕರು ದೂರು ನೀಡಿರುವ ಹಿನ್ನೆಲೆಯಲ್ಲಿ, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಪೊಲೀಸರು ಮೇಲಕ್ಕೆತ್ತಿದ್ದಾರೆ. ಜಿಲ್ಲೆಯ ಕಾಪು ಮಣಿಪುರದ ಬಡಗು ಮನೆ ಬಳಿ ಈ ಬೆಳವಣಿಗೆ ನಡೆಯಿತು.

ಸಾಮಾಜಿಕ ಕಾರ್ಯಕರ್ತೆ, ಪ್ರಾಣಿಪ್ರಿಯೆ ಬಿಂದು ಎಂಬವರು ನಾಯಿಯನ್ನು ಸಾಕಿದ್ದರು. ಫೆಬ್ರವರಿ 21ರಂದು ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದೆ. ಈ ಹಿನ್ನಲೆ ಸಾಕು ನಾಯಿಯನ್ನು ಮನೆಯವರು ಅಂತ್ಯಕ್ರಿಯೆ ನಡೆಸಿದ್ದರು. ನಾಯಿಗೆ ವಿಷ ಬೆರೆಸಿ ಕೊಂದಿರುವ ಶಂಕೆ ಹಿನ್ನೆಲೆಯಲ್ಲಿ ಫೆಬ್ರವರಿ 21ರಂದೇ ಬಿಂದು ಅವರು ಕಾಪು ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಹೊರತೆಗೆದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಯಿಯ ಕಳೇಬರ ಹೊರತೆಗೆಸಿ ಪೋಸ್ಟ್ ಮಾರ್ಟಂ ಮಾಡಿಸಿದ್ದಾರೆ.

ದೂರು ದಾಖಲಾದ ಕಾರಣ ಕಾನೂನು ಪ್ರಕ್ರಿಯೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸಬೇಕಾಯಿತು. ಹೆಡ್ ಕಾನ್‌ಸ್ಟೇಬಲ್‌ಗಳಾದ ಅರುಣ್ ಉಪ್ಪರು, ಸುಧಾಕರ್ ನಾಯ್ಸ್, ಪ್ರಾಣಿ ದಯಾ ಸಂಘದ ಮಂಜುಳಾ ಸಮಕ್ಷಮದಲ್ಲಿ ನಾಯಿಯ ಕಳೇಬರವನ್ನು ಗುಂಡಿಯಿಂದ ಮೇಲಕ್ಕೆತ್ತಲಾಯಿತು. ಪಶುವೈದ್ಯ ಡಾ.ಚಂದ್ರಕಾಂತ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ್ದು ವರದಿ ಬರಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

https://fb.watch/xZ8_hx2WYN/

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

42 minutes ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

56 minutes ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago