ಕಾಪು: ಹೆಚ್ಚುವರಿ ಸೈಲೆನ್ಸರ್ ಅಳವಡಿಸಿಕೊಂಡು, ಕರ್ಕಶ ಶಬ್ದದೊಂದಿಗೆ ಕಾಪು ಪೇಟೆಯಲ್ಲಿ ಓಡಾಡುತ್ತಿದ್ದ ಬುಲೆಟ್ಗಳನ್ನು ಪತ್ತೆ ಹಚ್ಚಿ, ಸವಾರರಿಗೆ ದಂಡ ವಿಧಿಸಿದ ಘಟನೆ ನಡೆದಿದೆ.
ಪ್ರಾದೇಶಿಕ ಸಾರಿಗೆ ಇಲಾಖೆಯ ಪರವಾನಿಗೆ ರಹಿತವಾಗಿ ಹೆಚ್ಚುವರಿಯಾಗಿ ಸೈಲೆನ್ಸರ್ ಅಳವಡಿಸಿ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ 6 ಬುಲೆಟ್ಗಳನ್ನು ಪತ್ತೆ ಹಚ್ಚಿದ ಕಾಪು ಪೊಲೀಸರು ಅವರಿಂದ 6,600 ರೂ. ದಂಡ ವಸೂಲಿ ಮಾಡಿದ್ದಾರೆ.
ಕಾಪು ಠಾಣಾಧಿಕಾರಿ ನವೀನ್ ನಾಯಕ್ ಅವರು ಬುಲೆಟ್ ಸವಾರರನ್ನು ಠಾಣೆಗೆ ಕರೆಸಿ ಮೆಕಾನಿಕ್ ಮೂಲಕ ಸೈಲೆನ್ಸರ್ ಗಳನ್ನು ಕಿತ್ತು ತೆಗೆದು, ಸಾಮಾನ್ಯ ಸೈಲೆನ್ಸರ್ ಗಳನ್ನು ಅಳವಡಿಸಿ ಎಚ್ಚರಿಕೆ ನೀಡಲಾಯಿತು. ಆಧುನಿಕ ಮಾದರಿಯ ರಾಕೆಟ್ ಸೈಲೆನ್ಸರ್ ಗಳನ್ನು ಬುಲೆಟ್ ಗಳಿಗೆ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಹಿನ್ನೆಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾಪು ಠಾಣಾಧಿಕಾರಿ ನವೀನ ನಾಯ್ಕ್ ತಿಳಿಸಿದ್ದಾರೆ.
ಆಧುನಿಕ ಮಾದರಿಯ ಡಬ್ಲೂ.ಬಿ.ಇ. ಮತ್ತು ರಾಕೆಟ್ ಸೈಲೆನ್ಸರ್ಗಳನ್ನು ಬುಲೆಟ್ಗಳಿಗೆ ಹಾಕಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾಪು ಠಾಣಾಧಿಕಾರಿ ನವೀನ್ ಎಸ್. ನಾಯಕ್ ತಿಳಿಸಿದ್ದಾರೆ.
ಕಾಪು ಕ್ರೈಂ ಎಸ್ಸೆ ಜಾನಕಿ, ಪ್ರೊಬೆಷನರಿ ಎಸ್ಸೆ ಸದಾಶಿವ, ಎಎಸ್ಐ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…