Featured

ಕಾಪು ಶರತ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ – vishwanews24

ಕಾಪು ಶರತ್ ಶೆಟ್ಟಿ ಕೊಲೆ ಪ್ರಕರಣ; ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ‍್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಕಾಪು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶರತ್ ಶೆಟ್ಟಿ ಕೊಲೆ ಬಳಿಕ ಆರೋಪಿ ಯೋಗೀಶ್ ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ. ಇದೀಗ ಆತ ತಾನಾಗಿಯೇ ಮೇ ೨೩ರಂದು ಉಡುಪಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿಯಾಗಿರುವ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಆರೋಪಿ ಯೋಗೀಶ್‌ನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

ಆರೋಪಿ ಯೋಗೀಶ್‌ನೊಂಡಿಗೆ ಪೊಲೀಸರು ವಿವಿಧೆಡೆ ಸ್ಥಳ ಮಹಜರು ನಡೆಸಿದ್ದಾರೆ. ತನಿಖೆಗಾಗಿ ಆರೋಪಿಯ ಮನೆ, ಹತ್ಯೆ ನಡೆದಿದ್ದ ಪರಿಸರ, ಪಾಂಗಳ ಹೊಳೆ ಸೇರಿ ವಿವಿಧೆಡೆ ಕರೆದೊಯ್ದಿದ್ದಾರೆ. ಆರೋಪಿ ಯೋಗೀಶ್ ಶರತ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago