Featured

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗೆ ಸಹಕರಿಸಿದಾತನ ವಿರುದ್ಧ ಪ್ರಕರಣ ದಾಖಲು – vishwanews24

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗೆ ಸಹಕರಿಸಿದಾತನ ವಿರುದ್ಧ ಪ್ರಕರಣ ದಾಖಲು

ಕಾಪು: ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ ಸಂದರ್ಭ ಮತ್ತೋರ್ವ ಆರೋಪಿಯ ಬಗ್ಗೆ ಪ್ರಧಾನ ಆರೋಪಿ ಯೋಗೀಶ್‌ ಆಚಾರ್ಯ ಬಾಯ್ಬಿಟ್ಟಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆ. 5ರಂದು ಪಾಂಗಾಳ ಶರತ್‌ ಶೆಟ್ಟಿ ಹತ್ಯೆಯಾಗಿತ್ತು. ಹತ್ಯೆಗೆ ಸಂಬಂಧಿಸಿದಂತೆ ಕಾಪು ಪೊಲೀಸರು ಆರೋಪಿಗಳಾದ ದಿವೇಶ್‌, ಲಿಖೀತ್‌, ನಾಗರಾಜ್‌ ಮತ್ತು ಸಹಕರಿಸಿದ್ದ ಆಕಾಶ್‌ ಕರ್ಕೇರ, ಮುಕೇಶ್‌, ಪ್ರಸನ್ನ ಶೆಟ್ಟಿ ಅವರನ್ನು ಬಂಧಿಸಿದ್ದರು. ಬಂಧಿತರ ಜತೆಗೆ ಭೂಗತ ಪಾತಕಿ ಕಲಿ ಯೋಗೀಶ್‌ ಮತ್ತು ಯೋಗೀಶ್‌ ಆಚಾರ್ಯ ವಿರುದ್ಧವೂ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಆರೋಪಿಗಾಗಿ ವಿವಿಧೆಡೆ ಶೋಧ ಕಾರ್ಯ ನಡೆಸಿದ್ದರೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಈ ನಡುವೆ ಶರತ್‌ ಶೆಟ್ಟಿ ಮನೆಯವರು ಹತ್ಯಾ ಆರೋಪಿಯ ಪತ್ತೆಗಾಗಿ ತಮ್ಮ ಕುಟುಂಬದ ವರ್ತೆ – ಪಂಜುರ್ಲಿ ದೈವಗಳ ಮೊರೆ ಹೋಗಿದ್ದರು. ಆರೋಪಿ ಪಾತಾಳದಲ್ಲೇ ಇದ್ದರೂ ಆತನನ್ನು ಹುಡುಕಿ ತರುತ್ತೇವೆ ಎಂದು ದೈವಗಳು ಅಭಯ ನೀಡಿದ್ದವು.

ಪ್ರಕರಣದ ಬಳಿಕ ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಯೋಗೀಶ್‌ ಆಚಾರ್ಯ ಮೇ 23ರಂದು ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಆತನನ್ನು ಪ್ರಕರಣದ ಪ್ರಸ್ತುತ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡು, ವಿಚಾರಣೆ ನಡೆಸಿದ್ದರು.

ಪೊಲೀಸ್‌ ವಿಚಾರಣೆ ವೇಳೆ ಆರೋಪಿ ಯೋಗೀಶ್‌ ಆಚಾರ್ಯ ಪಾಂಗಾಳ ಶರತ್‌ ಶೆಟ್ಟಿ ಹತ್ಯೆಗೆ ಕಾರಣವಾದ ಅಂಶಗಳು, ಹತ್ಯೆಯ ಬಳಿಕ ತನಗೆ ತಲೆ ಮರೆಸಿಕೊಳ್ಳಲು ಸಹಕರಿಸಿದ ದುಬಾೖಯಲ್ಲಿರುವ ರಾಜೇಶ್‌ ಆಚಾರ್ಯ ಎಂಬಾತನ ಬಗ್ಗೆ ಬಾಯ್ಬಿಟ್ಟಿದ್ದನು.

ಈ ವಿಚಾರವನ್ನು ಉಡುಪಿ ಎಸ್ಪಿ ಡಾ| ಕೆ. ಅರುಣ್‌ ಅವರು, ಯೋಗೀಶ್‌ ಆಚಾರ್ಯ ಬಾಯ್ಬಿಟ್ಟಿರುವ ವಿಚಾರಗಳು, ಆರೋಪಿಗೆ ಸಂಬಂಧಿಸಿದ ಮಾಹಿತಿ ಗಳನ್ನು ಕಲೆ ಹಾಕಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಯೋಗೀಶ್‌ ಆಚಾರ್ಯ ತಿಳಿಸಿದಂತೆ ರಾಜೇಶ್‌ ಆಚಾರ್ಯ ಮತ್ತು ಕಲಿ ಯೋಗೀಶ್‌ ಬಂಧನ ಬಾಕಿಯಿದೆ ಎಂದು  ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago