ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ ಅಭಿನಂದನಾ ಕಾರ್ಯಕ್ರಮ – Vishwanews24
ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ ಅಭಿನಂದನಾ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಉಡುಪಿ ತಾಲೂಕು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆಯವರನ್ನು ದಿನಾಂಕ – 30/06/2023ರಂದು ಶುಕ್ರವಾರ ಹಿರಿಯಡ್ಕ ಶಾಸಕರ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೇತ್ರಿ, ಕಾರ್ಯದರ್ಶಿ ಪ್ರಕಾಶ್ ಕುಲಾಲ್ ಮಂದಾರ್ತಿ, ರಾಜ್ಯ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ, ಭಜನಾ ಪರಿಷತ್ತಿನ ಪದಾಧಿಕಾರಿಗಳಾದ ವಿಜಯ ಶೆಟ್ಟಿ ಕೊಂಡಾಡಿ, ಧರ್ಮಯ್ಯ ಕೆ. ಹಿರಿಯಡ್ಕ, ಸಂಧ್ಯಾ ಕಾಮತ್ ಹಿರಿಯಡ್ಕ, ಗೋಕುಲದಾಸ್ ನಾಯಕ್ ಮೈರೆ, ಹಾಗೂ ಹಲವಾರು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್ – Vishwanews24
