ಉಡುಪಿ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 25/26/27 ರಂದು “ಕಾಪು ಕಡಲ ಪರ್ಬ” :vishwanews24

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 25/26/27 ರಂದು “ಕಾಪು ಕಡಲ ಪರ್ಬ” :vishwanews24

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ವತಿಯಿಂದ ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಡಿಸೆಂಬರ್ 26/27/28 ರಂದು ಕಾಪು ಕಡಲ ಪರ್ಬ ಉತ್ಸವ ಇಲ್ಲಿನ ಲೈಟ್ ಹೌಸ್ ಕಡಲ ಕಿನಾರೆ ಬಳಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕ್ರಮದ ಲೋಗೋ ಅನಾವರಣ ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಾತಾನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಈ ಕಾರ್ಯಕ್ರಮವೂ ಬೀಚ್ ಉತ್ಸವ-ಆಹಾರ ಮೇಳ-ಕ್ರೀಡೋತ್ಸವ-ಸಾಂಸ್ಕೃತಿಕ ಉತ್ಸವದ ಜತೆಗೆ ಆರೋಗ ತಪಾಸಣೆ ಶಿಬಿರವನ್ನೊಳಗೊಂಡಿದೆ ಎಂದರು.
ಇಡೀ ಅವಿಭಜಿತ ಜಿಲ್ಲೆಗೆ ಮಾದರಿಯಾಗುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶಹೊಂದಿದ್ದು ಕಾರ್ಯಕರ್ತರ ಶ್ರಮದಿಂದ ಇದು ಒಳಗೊಂಡಿದೆ ಎಂದರು.
ಈಗಾಗಲೇ ರಂಗತರಂಗ ಕಲಾವಿದರು ಕಾಪು ಇವರ ಹೊಸ ನಾಟಕ ಶೋಭಾಜಿ-ಖ್ಯಾತ ಸಂಗೀತ ನಿರ್ದೆಶಕ ರಘುದೀಕ್ಷಿತ್ ಅವರ ಸಂಗೀತ ರಸಮಂಜರಿ,ಹಗ್ಗಜಗ್ಗಾಟ,ವಾಲಿಬಾಲ್ , ತ್ರೋಬಾಲ್,ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳು ನಿಗದಿಯಾಗಿದ್ದು ಇನ್ನಷ್ಟು ಕಾರ್ಯಕ್ರಮವನ್ನು ಜೋಡಿಸುವ ಸಲುವಾಗಿ ಇಂದು ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದರು.

ವಿಶೇಷ ಆಹ್ವಾನಿತರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವಿಭಜಿತ ಎರಡು ಜಿಲ್ಲೆಯ ಶಾಸಕ ಸಂಸದರು ಸೇರಿದಂತೆ ರಾಜ್ಯದ ವಿವಿಧ ನಾಯಕರು, ಸಿನಿಮಾ ತಾರೆಯರು ಭಾಗವಹಿಸಲಿದ್ದಾರೆಂದರು.
ವಿಶೇಷವಾಗಿ ಈ ಎಲ್ಲಾ ಕಾರ್ಯಕ್ರಮವೂ ಕಾಪುವಿನ ಮಾಣಿಕ್ಯ ಕೀರ್ತಿ ಶೇಷ ಕಾಪು ಲೀಲಾಧರ ಶೆಟ್ಟಿಯವರ ಹೆಸರಿನ ವೇದಿಕೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಜೀತೆಂದ್ರ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿ,ಶರಣ್ ಮಟ್ಟು ಕಾರ್ಯಕ್ರಮ‌ನಿರೂಪಿಸಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ,ಮಾಜಿ ಶಾಸಕ ಲಾಲಾಜಿ ಮೆಂಡನ್,ಕುಯಿಲಾಡಿ ಸುರೇಶ್ ನಾಯಕ್,ಗೋಪಾಲಕೃಷ್ಣ ರಾವ್ ಮಟ್ಟು,ಶ್ರೀಕಾಂತ್ ನಾಯಕ್ ಅಲೆವೂರು,ಪುರಸಭೆ ಪ್ರಥಮ ಪ್ರಜೆ ಹರಿಣಾಕ್ಷಿ ದೇವಾಡಿಗ ಉಪಸ್ಥಿತರಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago