filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿಸೆಂಬರ್ 25/26/27 ರಂದು “ಕಾಪು ಕಡಲ ಪರ್ಬ” :vishwanews24
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ವತಿಯಿಂದ ,ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಡಿಸೆಂಬರ್ 26/27/28 ರಂದು ಕಾಪು ಕಡಲ ಪರ್ಬ ಉತ್ಸವ ಇಲ್ಲಿನ ಲೈಟ್ ಹೌಸ್ ಕಡಲ ಕಿನಾರೆ ಬಳಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕ್ರಮದ ಲೋಗೋ ಅನಾವರಣ ನಡೆಸಲಾಯಿತು.
ಈ ಸಂಧರ್ಭದಲ್ಲಿ ಮಾತಾನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಈ ಕಾರ್ಯಕ್ರಮವೂ ಬೀಚ್ ಉತ್ಸವ-ಆಹಾರ ಮೇಳ-ಕ್ರೀಡೋತ್ಸವ-ಸಾಂಸ್ಕೃತಿಕ ಉತ್ಸವದ ಜತೆಗೆ ಆರೋಗ ತಪಾಸಣೆ ಶಿಬಿರವನ್ನೊಳಗೊಂಡಿದೆ ಎಂದರು.
ಇಡೀ ಅವಿಭಜಿತ ಜಿಲ್ಲೆಗೆ ಮಾದರಿಯಾಗುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶಹೊಂದಿದ್ದು ಕಾರ್ಯಕರ್ತರ ಶ್ರಮದಿಂದ ಇದು ಒಳಗೊಂಡಿದೆ ಎಂದರು.
ಈಗಾಗಲೇ ರಂಗತರಂಗ ಕಲಾವಿದರು ಕಾಪು ಇವರ ಹೊಸ ನಾಟಕ ಶೋಭಾಜಿ-ಖ್ಯಾತ ಸಂಗೀತ ನಿರ್ದೆಶಕ ರಘುದೀಕ್ಷಿತ್ ಅವರ ಸಂಗೀತ ರಸಮಂಜರಿ,ಹಗ್ಗಜಗ್ಗಾಟ,ವಾಲಿಬಾಲ್ , ತ್ರೋಬಾಲ್,ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳು ನಿಗದಿಯಾಗಿದ್ದು ಇನ್ನಷ್ಟು ಕಾರ್ಯಕ್ರಮವನ್ನು ಜೋಡಿಸುವ ಸಲುವಾಗಿ ಇಂದು ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದರು.
ವಿಶೇಷ ಆಹ್ವಾನಿತರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವಿಭಜಿತ ಎರಡು ಜಿಲ್ಲೆಯ ಶಾಸಕ ಸಂಸದರು ಸೇರಿದಂತೆ ರಾಜ್ಯದ ವಿವಿಧ ನಾಯಕರು, ಸಿನಿಮಾ ತಾರೆಯರು ಭಾಗವಹಿಸಲಿದ್ದಾರೆಂದರು.
ವಿಶೇಷವಾಗಿ ಈ ಎಲ್ಲಾ ಕಾರ್ಯಕ್ರಮವೂ ಕಾಪುವಿನ ಮಾಣಿಕ್ಯ ಕೀರ್ತಿ ಶೇಷ ಕಾಪು ಲೀಲಾಧರ ಶೆಟ್ಟಿಯವರ ಹೆಸರಿನ ವೇದಿಕೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಜೀತೆಂದ್ರ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿ,ಶರಣ್ ಮಟ್ಟು ಕಾರ್ಯಕ್ರಮನಿರೂಪಿಸಿದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ,ಮಾಜಿ ಶಾಸಕ ಲಾಲಾಜಿ ಮೆಂಡನ್,ಕುಯಿಲಾಡಿ ಸುರೇಶ್ ನಾಯಕ್,ಗೋಪಾಲಕೃಷ್ಣ ರಾವ್ ಮಟ್ಟು,ಶ್ರೀಕಾಂತ್ ನಾಯಕ್ ಅಲೆವೂರು,ಪುರಸಭೆ ಪ್ರಥಮ ಪ್ರಜೆ ಹರಿಣಾಕ್ಷಿ ದೇವಾಡಿಗ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…