ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಸಚಿವ ಸ್ಥಾನಕ್ಕೆ ದಕ್ಷಿಣ ಕನ್ನಡ ಮೋಗವಿರ ಹಿತಸಾಧನಾ ವೇದಿಕೆ ಆಗ್ರಹ. -Vishwanews24

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಸಚಿವ ಸ್ಥಾನಕ್ಕೆ ದಕ್ಷಿಣ ಕನ್ನಡ ಮೋಗವಿರ ಹಿತಸಾಧನಾ ವೇದಿಕೆ ಆಗ್ರಹ. -Vishwanews24

ಉಡುಪಿ : ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಮೊಗವೀರ ಸಮುದಾಯಕ್ಕೆ ಸೇರಿದ ಮೀನುಗಾರರ ಸಮುದಾಯದ ಆಡಳಿತ ಪಕ್ಷದ ಏಕೈಕ ಪ್ರತಿನಿಧಿಯಾದ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಇವರಿಗೆ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಹಿತಸಾಧನಾ ವೇದಿಕೆ ಉಚ್ಚಿಲ ಅವರು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಪ್ರಸ್ತುತ ಕರ್ನಾಟಕದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರಕಾರವಿದೆ ಗಂಗಾಮತ ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದಲ್ಲಿ 80 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯ ಮೊಗವೀರ ಸಮುದಾಯ ಹಾಗಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಅನುಸರಿಸುತ್ತಿದೆ ಎಂಬ ಕೊರಗು ನಮ್ಮನ್ನು ಕಾಡುತ್ತಿದೆ ಎಂದರು.

ದೇಶದ ಎಲ್ಲ ರಾಜ್ಯಗಳಲ್ಲಿ ನಮ್ಮ ಸಮುದಾಯದ ಚುನಾಯಿತ ಜನಪ್ರತಿನಿಧಿಗಳು ಬೇರೆ ಬೇರೆ ಪಕ್ಷಗಳಿಂದ ಆಯ್ಕೆಯಾಗಿ ಆಯಾ ರಾಜ್ಯದ ಆಡಳಿತ ಪಕ್ಷಗಳ ಮೂಲಕ ಸಚಿವ ಸಂಪುಟದಲ್ಲಿ ಸೂಕ್ತಸ್ಥಾನಮಾನ ಸಿಕ್ಕಿರುತ್ತದೆ ಅಷ್ಟೇ ಅಲ್ಲದೆ ಕರ್ನಾಟಕದಲ್ಲೂ ಕೂಡ ಈ ಹಿಂದಿನ ಎಲ್ಲಾ ಸರಕಾರಗಳು ಮೀನುಗಾರರ ಸಮುದಾಯಕ್ಕೆ ಪ್ರಾತಿನಿಧಿತ್ವ ನೀಡುತ್ತ ಬಂದಿದ್ದಾರೆ ಆದರೆ ಬಿಜೆಪಿ ಮಾತ್ರ ನಮ್ಮ ಸಮುದಾಯಕ್ಕೆ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಬಹಳ ಖೇದಕರವಾಗಿದೆ, ಕರ್ನಾಟಕ ವಿಧಾನಸಭಾ ಸದಸ್ಯರ ಪೈಕಿ ಆಡಳಿತ ಪಕ್ಷದ ಗಂಗಾಮತ ಸಮುದಾಯಕ್ಕೆ ಸೇರಿರುವ ವಿಧಾನಸಭಾ ಸದಸ್ಯರ ಸಂಖ್ಯೆ ಕೇವಲ ಒಂದು ಹಾಗಾಗಿ ನಮ್ಮ ಸಮುದಾಯದ ಬಗ್ಗೆ ಈ ರೀತಿಯ ಜಾಣ ಕುರುಡನ್ನು ಮೊಗವೀರ ಸಮಾಜ ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಮೊಗವೀರ ಸಮುದಾಯಕ್ಕೆ ಸೇರಿರುವ ಕರ್ನಾಟಕದ ಏಕೈಕ ಶಾಸಕರಾದ ಭಾರತೀಯ ಜನತಾ ಪಕ್ಷದಿಂದ ಆರು ಬಾರಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿರುವ ಹಿರಿಯ ಅನುಭವಿ ಕಲಂಕರಹಿತ ರಾಜಕಾರಣಿಯಾಗಿರುವ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶ್ರೀ ಲಾಲಾಜಿ ಆರ್ ಮೆಂಡನ್ ಇವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕರ್ನಾಟಕದ ಸಮಸ್ತ ಮೊಗವೀರರ ಪರವಾಗಿ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನವೀನ್ ಕುಮಾರ್ ಕಟೀಲ್ ಅವರನ್ನು ಹಾಗೂ ಬಿಜೆಪಿ ಪಕ್ಷದ ಹೈಕಮಾಂಡನ್ನು ಆಗ್ರಹಿಸುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಮೊಗವೀರ ಹಿತಸಾಧನಾ ವೇದಿಕೆ ಇದರ ಅಧ್ಯಕ್ಷರಾದ ಪುಷ್ಪರಾಜ ಕೋಟ್ಯನ್,ಡಾ. ದೇವಿಪ್ರಸಾದ್ ಹೆಜಮಾಡಿ ರಾಜ್ಯಧ್ಯಕ್ಷರು ರಾಷ್ಟ್ರೀಯ ಮೀನುಗಾರರ ಸಂಘ, ದಾಮೋದರ ಸುವರ್ಣ ಹದಿನಾರು ಪಟ್ಣ ಮೊಗವೀರ ಮಹಾಸಭಾ ಅಧ್ಯಕ್ಷರು, ಮನೋಜ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

23 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago