ಕಾಪು ಶಾಸಕ ಲಾಲಾಜಿ ಗೆ ಮಂತ್ರಿಗಿರಿ….?
ಕಾಪು: ಹದಿನಾಲ್ಕು ತಿಂಗಳ ಸಂಮಿಶ್ರ ಸರ್ಕಾರ ಪತನದ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಡೆಸುತ್ತಿದ್ದು ಮುಖ್ಯಮಂತ್ರಿಯಾಗಿ ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲೇ ಸಂಪುಟ ರಚನೆ ಕಾರ್ಯ ಜೋರಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರ ಮೂರು ಹೆಸರುಗಳ ಪೈಕಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ಮಂತ್ರಿಮಂಡಲದಲ್ಲಿ ಕುರ್ಚಿ ಪಡೆಯುವ ಸಾಧ್ಯತೆ ಇದೆ ಎಂಬ ಮಾತು ಜೋರಾಗಿಯೆ ಕೇಳು ಬರುತ್ತಿದೆ.
ಮೂರು ಭಾರಿ ಶಾಸಕರಾಗಿ ಆಯ್ಕೆಯಾದ ಲಾಲಾಜಿ ಬಿಎಸ್ವೈ ಆಪ್ತರ ಪಟ್ಟಿಯಲ್ಲಿ ಹೆಸರುಗಿಟ್ಟಿಸಿಕೊಂಡಿದ್ದು ಮೀನುಗಾರಿಕಾ ಸಚಿವ ಸ್ಥಾನ ಗಟ್ಟಿ ಎಂಬ ಮಾತು ಕೇಳಿಬರುತ್ತಿದೆ.
ಹನ್ನೆರಡು ಸಾವಿರ ಮತಗಳ ಅಂತರದಿಂದ ಗೆದ್ದಿರುವ ಲಾಲಾಜಿ ಈ ಹಿಂದೆ ಬಿಜೆಪಿ ರಾಷ್ಟ್ರೀಯ ಮೀನುಗಾರಿಕಾ ಪ್ರಕೋಷ್ಠದ ಸಹ ಸಂಚಾಲಕನಾಗಿ ಕಾರ್ಯ ನಿರ್ವಹಿಸಿದುರ ಪರಿಣಾಮ ಮಂತ್ರಿಗಿರಿ ಸನಿಹವಾಗಿದೆ ಎಂದು ತಿಳಿದು ಬಂದಿದೆ.
ಮುಂದಿನ ಮೂರು ದಿನಗಳಲ್ಲಿ ಸಂಪುಟ ರಚನೆಯಾಗಲಿದ್ದು ಉಡುಪಿಗೆ ಉಸ್ತುವಾರಿ ಲಾಲಾಜಿ ಆರ್ ಮೆಂಡನ್ ಆಗುವರೇ ವಿಚಾರಕ್ಕೆ ತೆರೆ ಬೀಳಲಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…